ಕವಿತಾ ಅವರನ್ನು ಚಳ್ಳಕೆರೆ ತಾಲ್ಲೂಕಿನ ಮುಷ್ಠಲಗುಮ್ಮಿಗೆ ಮದುವೆ ಮಾಡಿಕೊಡಲಾಗಿತ್ತು. ‘ಶುಕ್ರವಾರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊಳಕಾಲ್ಮುರಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕಳುಹಿಸಿದರು. ಆಂಬುಲೆನ್ಸ್ನಲ್ಲಿ ಬಳ್ಳಾರಿಗೆ ಹೋಗುವಾಗ ಮಾರ್ಗ ಮಧ್ಯೆ ಕವಿತಾ ಮೃತಪಟ್ಟರು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ತುಳಸಿ ರಂಗನಾಥ್ ಮಾಹಿತಿ ನೀಡಿದರು.