‘ಬಹುತೇಕ ಎಲ್ಲ ಸಮುದಾಯದ ಶಾಸಕರಿಗೆ ಸಚಿವ ಸ್ಥಾನದ ಅವಕಾಶ ಸಿಕ್ಕಿದೆ. ಪ್ರತಿ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆ ತೋರಿಸಿದರೂ ಅಧಿಕಾರದಲ್ಲಿ ಅವಕಾಶ ಸಿಗುತ್ತಿಲ್ಲ. ಮೂಢನಂಬಿಕೆಗೆ ಕಟ್ಟುಬಿದ್ದು ಹಿಂದುಳಿದಿರುವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗಿರುವ ಅಗತ್ಯವಿದೆ. ಇದರಿಂದ ಇತರ ದುರ್ಬಲ ವರ್ಗದ ಸಮುದಾಯವನ್ನು ಮೇಲೆತ್ತಲು ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.