ಹಿರಿಯೂರು: ಬೆಂಗಳೂರಿನಿಂದ ಹಂಪಿಗೆ ಹೋಗುವ ಮಾರ್ಗದಲ್ಲಿ ಭಾನುವಾರ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಕುಮಾರಿದೇವಿ, ಪುತ್ರ ಆದ್ಯವೀರ್ ನರಸಿಂಹರಾಜ ಒಡೆಯರ್ ಹಾಗೂ ಅತ್ತೆ ಮಹಿಶ್ರೀ ಕುಮಾರಿ ಅವರೊಂದಿಗೆ ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ಇರುವ ಗಾಯತ್ರಿ ಹಾಗೂ ಮಾರಿಕಣಿವೆ ಸಮೀಪ ಇರುವ ವಾಣಿವಿಲಾಸ ಜಲಾಶಯಕ್ಕೆ ಭೇಟಿ ನೀಡಿದ್ದರು.