<p><strong>ಚಿತ್ರದುರ್ಗ</strong>: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದ ಅಂಗವಾಗಿ ಕೋಟೆನಗರಿ ಸಂಪೂರ್ಣವಾಗಿ ಕೇಸರಿಮಯವಾಗಿದೆ. ನಗರ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿ ಬಂಟಿಂಗ್ಸ್, ಕಟೌಟ್ಗಳು ರಾರಾಜಿಸುತ್ತಿವೆ. ಶನಿವಾರ ನಡೆಯಲಿರುವ ಉತ್ಸವಕ್ಕೆ ಸ್ವಾಗತ ಕೋರುವ ಕಮಾನುಗಳು, ಕಟೌಟ್ಗಳು ರಾರಾಜಿಸುತ್ತಿವೆ.</p><p>ಐತಿಹಾಸಿಕ ನಗರದ ಪ್ರಮುಖ ಸ್ಮಾರಕಗಳು, ಬೀದಿ, ವೃತ್ತಗಳಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ– 48ರಲ್ಲಿ 6 ಕಿ.ಮೀವರೆಗೆ ಕೇಸರಿ ಬಂಟಿಂಗ್ಸ್, ಅಭಿಮಾನೋತ್ಸವದ ಧ್ವಜಗಳನ್ನು ಅಳವಡಿಸಲಾಗಿದೆ. ನಗರದಲ್ಲಿ ಹಾದುಹೋಗಿರುವ ಹಳೇ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಕೇಸರಿಮಯವಾಗಿದೆ. ರಾಜ್ಯದ ಮೂಲೆಮೂಲೆಯಿಂದ ಬರುವ ಲಕ್ಷಾಂತರ ಜನರಿಗೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.</p><p>ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ವಿಶಾಲ ಮೈದಾನದಲ್ಲಿ ಅಭಿಮಾನೋತ್ಸವ ನಡೆಯಲಿದ್ದು ಅಂತಿಮ ಹಂತದ ಸಿದ್ಧತೆ ಮಾಡಲಾಗುತ್ತಿದೆ. ಬೃಹತ್ ವೇದಿಕೆಯ ಪ್ರವೇಶದ್ವಾರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ತಮಿಳುನಾಡಿನಿಂದ ಬಂದಿರುವ ಕಲಾವಿದರು ಪ್ರವೇಶದ್ವಾರ ಹಾಗೂ ಮುಖ್ಯ ವೇದಿಕೆಯ ಅಲಂಕಾರ ಮಾಡುತ್ತಿದ್ದಾರೆ. ಕಳೆದ 3 ದಿನಗಳಿಂದಲೂ ನಗರದಲ್ಲೇ ವಾಸ್ತವ್ಯ ಹೂಡಿರುವ ಬಿಜೆಪಿ ರಾಜ್ಯ ಘಕಟದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧತೆ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p>.ಅಭಿಮಾನೋತ್ಸವ: ಸಾವಿರ ಸ್ವಾಮೀಜಿಗಳಿಗೆ ಪ್ರತ್ಯೇಕ ವೇದಿಕೆ,10 ಲಕ್ಷ ಜನರಿಗೆ ಊಟ.ರಾಜ್ಯದಲ್ಲಿ ಕಮಲ ಅರಳಿಸಿದ ಬಿಎಸ್ವೈ– ಎಂ.ಪಿ. ರೇಣುಕಾಚಾರ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವದ ಅಂಗವಾಗಿ ಕೋಟೆನಗರಿ ಸಂಪೂರ್ಣವಾಗಿ ಕೇಸರಿಮಯವಾಗಿದೆ. ನಗರ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿ ಬಂಟಿಂಗ್ಸ್, ಕಟೌಟ್ಗಳು ರಾರಾಜಿಸುತ್ತಿವೆ. ಶನಿವಾರ ನಡೆಯಲಿರುವ ಉತ್ಸವಕ್ಕೆ ಸ್ವಾಗತ ಕೋರುವ ಕಮಾನುಗಳು, ಕಟೌಟ್ಗಳು ರಾರಾಜಿಸುತ್ತಿವೆ.</p><p>ಐತಿಹಾಸಿಕ ನಗರದ ಪ್ರಮುಖ ಸ್ಮಾರಕಗಳು, ಬೀದಿ, ವೃತ್ತಗಳಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ– 48ರಲ್ಲಿ 6 ಕಿ.ಮೀವರೆಗೆ ಕೇಸರಿ ಬಂಟಿಂಗ್ಸ್, ಅಭಿಮಾನೋತ್ಸವದ ಧ್ವಜಗಳನ್ನು ಅಳವಡಿಸಲಾಗಿದೆ. ನಗರದಲ್ಲಿ ಹಾದುಹೋಗಿರುವ ಹಳೇ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಕೇಸರಿಮಯವಾಗಿದೆ. ರಾಜ್ಯದ ಮೂಲೆಮೂಲೆಯಿಂದ ಬರುವ ಲಕ್ಷಾಂತರ ಜನರಿಗೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.</p><p>ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ವಿಶಾಲ ಮೈದಾನದಲ್ಲಿ ಅಭಿಮಾನೋತ್ಸವ ನಡೆಯಲಿದ್ದು ಅಂತಿಮ ಹಂತದ ಸಿದ್ಧತೆ ಮಾಡಲಾಗುತ್ತಿದೆ. ಬೃಹತ್ ವೇದಿಕೆಯ ಪ್ರವೇಶದ್ವಾರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ತಮಿಳುನಾಡಿನಿಂದ ಬಂದಿರುವ ಕಲಾವಿದರು ಪ್ರವೇಶದ್ವಾರ ಹಾಗೂ ಮುಖ್ಯ ವೇದಿಕೆಯ ಅಲಂಕಾರ ಮಾಡುತ್ತಿದ್ದಾರೆ. ಕಳೆದ 3 ದಿನಗಳಿಂದಲೂ ನಗರದಲ್ಲೇ ವಾಸ್ತವ್ಯ ಹೂಡಿರುವ ಬಿಜೆಪಿ ರಾಜ್ಯ ಘಕಟದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧತೆ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p>.ಅಭಿಮಾನೋತ್ಸವ: ಸಾವಿರ ಸ್ವಾಮೀಜಿಗಳಿಗೆ ಪ್ರತ್ಯೇಕ ವೇದಿಕೆ,10 ಲಕ್ಷ ಜನರಿಗೆ ಊಟ.ರಾಜ್ಯದಲ್ಲಿ ಕಮಲ ಅರಳಿಸಿದ ಬಿಎಸ್ವೈ– ಎಂ.ಪಿ. ರೇಣುಕಾಚಾರ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>