ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಮಿಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಧನ ಬೆಲೆ ಏರಿಕೆಯಾಗಿದೆ. ಕೃಷಿ ಪರಿಕರಗಳ ಬೆಲೆ ಹೆಚ್ಚಾಗಿದ್ದು, ಪೈಪುಗಳನ್ನು ಖರೀದಿಸಲು ರೈತರು ಹೆಣಗಾಡುವ ಸ್ಥಿತಿ ಇದೆ. ಇವರ ಸಂಕಷ್ಟವನ್ನು ಆಲಿಸುವವರು ಯಾರು’ ಎಂದು ಪ್ರಶ್ನಿಸಿದರು.