<p><strong>ಚಿತ್ರದುರ್ಗ:</strong> ‘ವ್ಯಸನಗಳು ವಿದ್ಯಾರ್ಥಿಗಳ ಶಕ್ತಿ, ಚೈತನ್ಯವನ್ನು ಕಸಿಯುತ್ತಿರುವ ಹೊತ್ತಿನಲ್ಲಿ ನಶಾಮುಕ್ತ ಕ್ಯಾಂಪಸ್, ಆರೋಗ್ಯಪೂರ್ಣ ಯುವ ಕರ್ನಾಟಕವನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಸಿ.ಭಗವಾನ್ ಹೇಳಿದರು.</p>.<p>ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಜಿಲ್ಲೆಯ ಸಂಯೋಜಿತ ಕಾಲೇಜುಗಳ ಸಹಯೋಗದಲ್ಲಿ ಬುಧವಾರ ನಡೆದ ನಶಾಮುಕ್ತ ಭಾರತ, ಅಂಗಾಂಗ ದಾನ ಜಾಗೃತಿ ಅಭಿಯಾನ ಮತ್ತು ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪಾಠ, ಪರೀಕ್ಷೆ, ಫಲಿತಾಂಶದಂತಹ ಜವಾಬ್ದಾರಿಗಳ ಜತೆಗೆ ವಿದ್ಯಾರ್ಥಿಗಳ ಭದ್ರ ಭವಿಷ್ಯ ಹಾಗೂ ಆ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಆರೋಗ್ಯ ವಿವಿ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಬಗ್ಗೆ, ಅವರ ಕುಟುಂಬ ಹಾಗೂ ಸಮಾಜದ ಬಗೆಗೆ ನಾವು ಹೊಂದಿರುವ ಕಾಳಜಿ ಹಾಗೂ ಕಳಕಳಿಯ ಭಾಗವಾಗಿ ಕಳೆದ ಮೂರು ತಿಂಗಳಿಂದ ಜಿಲ್ಲೆಗಳಿಗೆ ಸಂಚರಿಸಿ ಜಾಗೃತಿ ನಡೆಸಲಾಗುತ್ತಿದೆ’ ಎಂದರು.</p>.<p>‘ನಮ್ಮ ಎಲ್ಲಾ 1,500 ಕಾಲೇಜು ಆವರಣಗಳನ್ನು ನಶಾಮುಕ್ತಗೊಳಿಸುವುದು ಹಾಗೂ ನಮ್ಮ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಅಂಗಾಂಗ ದಾನದ ಬಗ್ಗೆ ತಿಳಿವಳಿಕೆ ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ’ ಎಂದರು.</p>.<p>‘ತರಗತಿಗಳಲ್ಲಿ, ಕ್ಯಾಂಪಸ್ಗಳಲ್ಲಿ ಯಾವುದೇ ವಿಧದ ಮಾದಕ ದ್ರವ್ಯ ಸೇವಿಸುವುದಿಲ್ಲ. ಮಾದಕ ವಸ್ತುಗಳ ಮಾರಾಟ ಕಂಡುಬಂದರೆ ಸುಮ್ಮನಿರುವುದಿಲ್ಲ ಎಂದು ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಬೇಕು. ಡ್ರಗ್, ಮದ್ಯಪಾನ, ತಂಬಾಕು ಸೇವನೆಯಿಂದ ದೂರು ಉಳಿಯುವ ಸಂಕಲ್ಪ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ದೇಶದಲ್ಲಿ ಪ್ರತಿ ವರ್ಷ 17,000 ಅಂಗಾಂಗ ಕಸಿ ನಡೆಯುತ್ತಿವೆ. ಆದರೆ ಅಂಗಾಂಗ ಕಸಿಗಾಗಿ ಕಾಯುತ್ತಿರುವ ರೋಗಿಗಳ ಸಂಖ್ಯೆ 3 ಲಕ್ಷಕ್ಕೂ ಅಧಿಕವಿದೆ. ಅಂಗಾಂಗ ದಾನ ಇಂದಿನ ತುರ್ತು ಅಗತ್ಯವಾಗಿದ್ದು, ಸಾರ್ವಜನಿಕರಲ್ಲೂ ಈ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಅಂಗಾಂಗ ದಾನದ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನೀವು ಕೈಗೊಳ್ಳುವ ಒಂದು ಸಣ್ಣ ನಿರ್ಧಾರದಿಂದ ಎಂಟು ಜನರ ಜೀವ ಉಳಿಯಬಲ್ಲದು’ ಎಂದರು.</p>.<p>ಶಾಸಕ ಎಂ.ಚಂದ್ರಪ್ಪ ಮಾತನಾಡಿ ‘ವೈದ್ಯಕೀಯ ಹಾಗೂ ನರ್ಸಿಂಗ್ ಸೇವೆ ಸಮಾಜದಲ್ಲಿ ಅತ್ಯುತ್ತಮ ಸೇವೆ. ಪರಿವರ್ತನೆ ತರುವ ಶಕ್ತಿ ಹಾಗೂ ಅವಕಾಶ ಇರುವುದು ಇದೇ ವೃತ್ತಿಯಲ್ಲಿ. ಇನ್ನೊಂದು ಜೀವ ಉಳಿಸುವ ಅವಕಾಶ ವೈದ್ಯಕೀಯ ವೃತ್ತಿಯಲ್ಲಿದೆ. ಈ ವೃತ್ತಿಯಲ್ಲಿರುವ ಯುವಜನರು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದರು.</p>.<p>‘ವಿಶ್ವವಿದ್ಯಾಲಯವೊಂದು ರಸ್ತೆಗೆ ಇಳಿದು ಜನಜಾಗೃತಿಯಲ್ಲಿ ತೊಡಗುವುದು ಅಪರೂಪ. ವಿಶ್ವವಿದ್ಯಾಲಯದ ಕುಲಪತಿ ಜಿಲ್ಲೆ ಜಿಲ್ಲೆಯಲ್ಲಿ ತಿರುಗಿ, ವಿದ್ಯಾರ್ಥಿಗಳನ್ನೆಲ್ಲಾ ಒಟ್ಟುಗೂಡಿಸಿಕೊಂಡು ಜಾಗೃತಿ ಜಾಥಾ, ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಅಪರೂಪ. ಇಂತಹ ಬದ್ಧತೆಯನ್ನು ಪ್ರತಿಯೊಂದು ವಿವಿಗಳೂ ಪ್ರದರ್ಶಿಸಬೇಕು. ಸಮಾಜಮುಖಿಯಾಗಿ ಕೆಲಸ ಮಾಡಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಶಿವಲಿಂಗಾನಂದ ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ವ್ಯಸನಗಳು ವಿದ್ಯಾರ್ಥಿಗಳ ಶಕ್ತಿ, ಚೈತನ್ಯವನ್ನು ಕಸಿಯುತ್ತಿರುವ ಹೊತ್ತಿನಲ್ಲಿ ನಶಾಮುಕ್ತ ಕ್ಯಾಂಪಸ್, ಆರೋಗ್ಯಪೂರ್ಣ ಯುವ ಕರ್ನಾಟಕವನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಸಿ.ಭಗವಾನ್ ಹೇಳಿದರು.</p>.<p>ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಜಿಲ್ಲೆಯ ಸಂಯೋಜಿತ ಕಾಲೇಜುಗಳ ಸಹಯೋಗದಲ್ಲಿ ಬುಧವಾರ ನಡೆದ ನಶಾಮುಕ್ತ ಭಾರತ, ಅಂಗಾಂಗ ದಾನ ಜಾಗೃತಿ ಅಭಿಯಾನ ಮತ್ತು ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪಾಠ, ಪರೀಕ್ಷೆ, ಫಲಿತಾಂಶದಂತಹ ಜವಾಬ್ದಾರಿಗಳ ಜತೆಗೆ ವಿದ್ಯಾರ್ಥಿಗಳ ಭದ್ರ ಭವಿಷ್ಯ ಹಾಗೂ ಆ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಆರೋಗ್ಯ ವಿವಿ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಬಗ್ಗೆ, ಅವರ ಕುಟುಂಬ ಹಾಗೂ ಸಮಾಜದ ಬಗೆಗೆ ನಾವು ಹೊಂದಿರುವ ಕಾಳಜಿ ಹಾಗೂ ಕಳಕಳಿಯ ಭಾಗವಾಗಿ ಕಳೆದ ಮೂರು ತಿಂಗಳಿಂದ ಜಿಲ್ಲೆಗಳಿಗೆ ಸಂಚರಿಸಿ ಜಾಗೃತಿ ನಡೆಸಲಾಗುತ್ತಿದೆ’ ಎಂದರು.</p>.<p>‘ನಮ್ಮ ಎಲ್ಲಾ 1,500 ಕಾಲೇಜು ಆವರಣಗಳನ್ನು ನಶಾಮುಕ್ತಗೊಳಿಸುವುದು ಹಾಗೂ ನಮ್ಮ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಅಂಗಾಂಗ ದಾನದ ಬಗ್ಗೆ ತಿಳಿವಳಿಕೆ ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ’ ಎಂದರು.</p>.<p>‘ತರಗತಿಗಳಲ್ಲಿ, ಕ್ಯಾಂಪಸ್ಗಳಲ್ಲಿ ಯಾವುದೇ ವಿಧದ ಮಾದಕ ದ್ರವ್ಯ ಸೇವಿಸುವುದಿಲ್ಲ. ಮಾದಕ ವಸ್ತುಗಳ ಮಾರಾಟ ಕಂಡುಬಂದರೆ ಸುಮ್ಮನಿರುವುದಿಲ್ಲ ಎಂದು ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಬೇಕು. ಡ್ರಗ್, ಮದ್ಯಪಾನ, ತಂಬಾಕು ಸೇವನೆಯಿಂದ ದೂರು ಉಳಿಯುವ ಸಂಕಲ್ಪ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ದೇಶದಲ್ಲಿ ಪ್ರತಿ ವರ್ಷ 17,000 ಅಂಗಾಂಗ ಕಸಿ ನಡೆಯುತ್ತಿವೆ. ಆದರೆ ಅಂಗಾಂಗ ಕಸಿಗಾಗಿ ಕಾಯುತ್ತಿರುವ ರೋಗಿಗಳ ಸಂಖ್ಯೆ 3 ಲಕ್ಷಕ್ಕೂ ಅಧಿಕವಿದೆ. ಅಂಗಾಂಗ ದಾನ ಇಂದಿನ ತುರ್ತು ಅಗತ್ಯವಾಗಿದ್ದು, ಸಾರ್ವಜನಿಕರಲ್ಲೂ ಈ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಅಂಗಾಂಗ ದಾನದ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನೀವು ಕೈಗೊಳ್ಳುವ ಒಂದು ಸಣ್ಣ ನಿರ್ಧಾರದಿಂದ ಎಂಟು ಜನರ ಜೀವ ಉಳಿಯಬಲ್ಲದು’ ಎಂದರು.</p>.<p>ಶಾಸಕ ಎಂ.ಚಂದ್ರಪ್ಪ ಮಾತನಾಡಿ ‘ವೈದ್ಯಕೀಯ ಹಾಗೂ ನರ್ಸಿಂಗ್ ಸೇವೆ ಸಮಾಜದಲ್ಲಿ ಅತ್ಯುತ್ತಮ ಸೇವೆ. ಪರಿವರ್ತನೆ ತರುವ ಶಕ್ತಿ ಹಾಗೂ ಅವಕಾಶ ಇರುವುದು ಇದೇ ವೃತ್ತಿಯಲ್ಲಿ. ಇನ್ನೊಂದು ಜೀವ ಉಳಿಸುವ ಅವಕಾಶ ವೈದ್ಯಕೀಯ ವೃತ್ತಿಯಲ್ಲಿದೆ. ಈ ವೃತ್ತಿಯಲ್ಲಿರುವ ಯುವಜನರು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದರು.</p>.<p>‘ವಿಶ್ವವಿದ್ಯಾಲಯವೊಂದು ರಸ್ತೆಗೆ ಇಳಿದು ಜನಜಾಗೃತಿಯಲ್ಲಿ ತೊಡಗುವುದು ಅಪರೂಪ. ವಿಶ್ವವಿದ್ಯಾಲಯದ ಕುಲಪತಿ ಜಿಲ್ಲೆ ಜಿಲ್ಲೆಯಲ್ಲಿ ತಿರುಗಿ, ವಿದ್ಯಾರ್ಥಿಗಳನ್ನೆಲ್ಲಾ ಒಟ್ಟುಗೂಡಿಸಿಕೊಂಡು ಜಾಗೃತಿ ಜಾಥಾ, ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಅಪರೂಪ. ಇಂತಹ ಬದ್ಧತೆಯನ್ನು ಪ್ರತಿಯೊಂದು ವಿವಿಗಳೂ ಪ್ರದರ್ಶಿಸಬೇಕು. ಸಮಾಜಮುಖಿಯಾಗಿ ಕೆಲಸ ಮಾಡಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಶಿವಲಿಂಗಾನಂದ ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>