<p><strong>ಚಿತ್ರದುರ್ಗ: </strong>ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮೃತರಾದ ರೈತರಿಗೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸಭೆ ಆರಂಭ ಆಗುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಅವರು ಶ್ರದ್ಧಾಂಜಲಿ ಸಲ್ಲಿಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ಸದಸ್ಯ ಅಜ್ಜಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದಲ್ಲಿ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಗದ್ದಲ ಉಂಟಾಯಿತು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, 'ರೈತರು ದೇಶದ ಬೆನ್ನೆಲುಬು. ಕೃಷಿ ಕ್ಷೇತ್ರ ಆತಂಕ ಎದುರಿಸುತ್ತಿದೆ. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಗೌರವಿಸೋಣ. ಇದರಲ್ಲಿ ರಾಜಕೀಯ ಮಾಡಬಾರದು' ಎಂದು ಮನವಿ ಮಾಡಿದರು.</p>.<p>'ರೈತರ ಬಗ್ಗೆ ಗೌರವ ಹಾಗೂ ಕಾಳಜಿ ಇರುವವರು ಶ್ರದ್ಧಾಂಜಲಿ ಸಲ್ಲಿಸಿ. ರೈತರ ಬಗ್ಗೆ ಕಾಳಜಿ ಇಲ್ಲದವರು ಕುಳಿತುಕೊಳ್ಳಿ' ಎಂದು ಕಾಂಗ್ರೆಸ್ ಸದಸ್ಯ ಪ್ರಕಾಶಮೂರ್ತಿ ಹೇಳಿದರು. ಬಳಿಕ ಎಲ್ಲರೂ ಎದ್ದುನಿಂತು ಶ್ರದ್ಧಾಂಜಲಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮೃತರಾದ ರೈತರಿಗೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸಭೆ ಆರಂಭ ಆಗುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಅವರು ಶ್ರದ್ಧಾಂಜಲಿ ಸಲ್ಲಿಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ಸದಸ್ಯ ಅಜ್ಜಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದಲ್ಲಿ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಗದ್ದಲ ಉಂಟಾಯಿತು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, 'ರೈತರು ದೇಶದ ಬೆನ್ನೆಲುಬು. ಕೃಷಿ ಕ್ಷೇತ್ರ ಆತಂಕ ಎದುರಿಸುತ್ತಿದೆ. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಗೌರವಿಸೋಣ. ಇದರಲ್ಲಿ ರಾಜಕೀಯ ಮಾಡಬಾರದು' ಎಂದು ಮನವಿ ಮಾಡಿದರು.</p>.<p>'ರೈತರ ಬಗ್ಗೆ ಗೌರವ ಹಾಗೂ ಕಾಳಜಿ ಇರುವವರು ಶ್ರದ್ಧಾಂಜಲಿ ಸಲ್ಲಿಸಿ. ರೈತರ ಬಗ್ಗೆ ಕಾಳಜಿ ಇಲ್ಲದವರು ಕುಳಿತುಕೊಳ್ಳಿ' ಎಂದು ಕಾಂಗ್ರೆಸ್ ಸದಸ್ಯ ಪ್ರಕಾಶಮೂರ್ತಿ ಹೇಳಿದರು. ಬಳಿಕ ಎಲ್ಲರೂ ಎದ್ದುನಿಂತು ಶ್ರದ್ಧಾಂಜಲಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>