<p><strong>ಚಿತ್ರದುರ್ಗ: </strong>ಮುಂದಿನ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ 251 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂಬುದನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುರುತಿಸಿದೆ. ₹ 16 ಕೋಟಿ ವೆಚ್ಚದ ಕ್ರಿಯಾಯೋಜನೆ ಬಗ್ಗೆ ಶಾಸಕರ ಅಧ್ಯಕ್ಷತೆಯ ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಚರ್ಚಿಸಿ, ಸರ್ಕಾರದ ಅನುಮೋದನೆ ಪಡೆಯಲು ಸಜ್ಜಾಗಿದೆ.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಸಭೆಗೆ ವಿವರಗಳನ್ನು ನೀಡಿದರು. ಬೇಸಿಗೆ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾದ ರೀತಿಯನ್ನು ಸಭೆಯ ಮುಂದಿಟ್ಟರು.</p>.<p>‘ಬೇಸಿಗೆ ಆರಂಭವಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ನಿತ್ಯ ದೂರುಗಳು ಬರುತ್ತಿವೆ. ಆದಷ್ಟು ಬೇಗ ಜನರಿಗೆ ಸ್ಪಂದಿಸುವ ಅಗತ್ಯವಿದೆ. ಕೊಳವೆ ಬಾವಿ ಕೊರೆಸುವುದು ಸೇರಿ ಇತರ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸೂಚನೆ ನೀಡಿದರು.</p>.<p><span class="quote">ಏಜೆನ್ಸಿ ರದ್ಧತಿಗೆ ಸೂಚನೆ:</span>ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಿಸುವಲ್ಲಿ ವಿಫಲವಾದ ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಪಡಿಸಿ ಎಂದು ಶಶಿಕಲಾ ತಾಕೀತು ಮಾಡಿದರು.</p>.<p>‘ನಿರ್ವಹಣೆಯ ಗುತ್ತಿಗೆ ಪಡೆದ ಏಜೆನ್ಸಿಗೆ ನೀರಿನ ಹಣ ಸಂದಾಯವಾಗುತ್ತಿದೆ. ದುರಸ್ತಿಗೆ ಮಾಸಿಕ ₹ 3 ಸಾವಿರ ನೀಡಲಾಗುತ್ತಿದೆ. ಆದರೂ, ಹಲವು ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಕುಡಿಯಲು ನೀರು ಕೊಡದೇ ಇದ್ದರೆ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ. ಹೊಣೆಗಾರಿಕೆ ಅರಿತು ಕೆಲಸ ಮಾಡಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿರುವ 1,052 ಘಟಕಗಳಲ್ಲಿ 991 ಘಟಕ ಕಾರ್ಯನಿರ್ವಹಿಸುತ್ತಿವೆ. 20 ಲೀಟರ್ ನೀರಿಗೆ ₹ 5 ನಿಗದಿ ಮಾಡಲಾಗಿದೆ. ₹ 5 ಬದಲು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತಿರುವ ಇಲಾಖೆಯ ಕ್ರಮಕ್ಕೆ ಅಧ್ಯಕ್ಷರು ವಿರೋಧ ವ್ಯಕ್ತಪಡಿಸಿದರು.</p>.<p>‘ಕೂಲಿ ಕಾರ್ಮಿಕ ಕುಟುಂಬ ಸ್ಮಾರ್ಟ್ ಕಾರ್ಡ್ ಹೊಂದುವುದು ಕಷ್ಟ. ಮೊದಲೇ ಹಣ ಕೊಟ್ಟು ರಿಚಾರ್ಜ್ ಮಾಡಿಸಿಕೊಳ್ಳಲು ಆಗದು. ₹ 5 ಕಾಯಿನ್ ವ್ಯವಸ್ಥೆಯೇ ಇರಲಿ. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ’ ಎಂದರು.</p>.<p><span class="quote">ಪ್ರಯೋಗಾಲ ಸೇರಿದ ಔಷಧ:</span>ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ರೋಗನಿರೋಧ ಶಕ್ತಿ ಹೆಚ್ಚಿಸಬಲ್ಲ ಔಷಧ ಖರೀದಿಸಿದ ಆಯುರ್ವೇದ ಇಲಾಖೆ, ಬಳಕೆಗೆ ಪ್ರಯೋಗಾಲಯದ ಅನುಮತಿಗೆ ಒಂದೂವರೆ ತಿಂಗಳಿಂದ ಕಾಯುತ್ತಿರುವ ಸಂಗತಿ ಸಭೆಯಲ್ಲಿ ಬೆಳಕಿಗೆ ಬಂದಿತು.</p>.<p>ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲ ಔಷಧ ಹಾಗೂ ಮಾತ್ರಗಳನ್ನು ಖರೀದಿಸಲು ಜಿಲ್ಲಾ ಪಂಚಾಯಿತಿ ₹ 32 ಲಕ್ಷ ಅನುದಾನ ನೀಡಿದೆ. ಆಯುರ್ವೇದ ಇಲಾಖೆ ಔಷಧ ಖರೀದಿಸಿದೆ. ಆದರೆ, ಇದನ್ನು ಸಾರ್ವಜನಿಕರಿಗೆ ವಿತರಿಸುವುದಕ್ಕೂ ಮೊದಲು ಪ್ರಯೋಗಾಲಯದ ಅನುಮತಿ ಪಡೆಯುವುದು ಕಡ್ಡಾಯ.</p>.<p>‘ಔಷಧಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಒಂದೂವರೆ ತಿಂಗಳು ಕಳೆದಿದೆ. ರಾಜ್ಯಕ್ಕೆ ಒಂದೇ ಪ್ರಯೋಗಾಲಯ ಇರುವುದರಿಂದ ಕಾರ್ಯದ ಒತ್ತಡ ಹೆಚ್ಚಾಗಿದೆ. ಹೀಗಾಗಿ, ಅನುಮತಿ ಸಿಗುತ್ತಿಲ್ಲ’ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ವಿಶ್ವನಾಥ್ ತಿಳಿಸಿದರು.</p>.<p>ಉಪಾಧ್ಯಕ್ಷೆ ವಿಜಯಲಕ್ಷ್ಮಿ ಪ್ರಕಾಶ್ ಇದ್ದರು.</p>.<p>***</p>.<p>ಆರ್ಒ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಹಸ್ತಾಂತರಿಸುವಾಗ ದುರಸ್ತಿಗೆ ಸೂಚಿಸಲಾಗಿತ್ತು. ಪಿಡಿಒಗಳ ನೆರವು ಪಡೆದು ಎಲ್ಲ ಘಟಕ ಸರಿಪಡಿಸಲಾಗುವುದು.</p>.<p><strong>ಡಾ.ಕೆ.ನಂದಿನಿದೇವಿ, ಸಿಇಒ, ಜಿಲ್ಲಾ ಪಂಚಾಯಿತಿ</strong></p>.<p>***</p>.<p>ಸೀಬಾರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಬಿಂದಿಗೆ ನೀರು ಬಳಕೆ ಆಗಿಲ್ಲ. ಆದರೆ, ದುರಸ್ತಿಯ ಲೆಕ್ಕ ಬರೆಯಲಾಗಿದೆ. ಖಾಸಗಿ ಘಟಕಗಳಂತೆ ಸರ್ಕಾರಿ ಘಟಕ ಕಾರ್ಯನಿರ್ವಹಿಸಬೇಕು.</p>.<p><strong>ಆರ್.ನರಸಿಂಹರಾಜು, ಅಧ್ಯಕ್ಷ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಮುಂದಿನ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ 251 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂಬುದನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗುರುತಿಸಿದೆ. ₹ 16 ಕೋಟಿ ವೆಚ್ಚದ ಕ್ರಿಯಾಯೋಜನೆ ಬಗ್ಗೆ ಶಾಸಕರ ಅಧ್ಯಕ್ಷತೆಯ ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಚರ್ಚಿಸಿ, ಸರ್ಕಾರದ ಅನುಮೋದನೆ ಪಡೆಯಲು ಸಜ್ಜಾಗಿದೆ.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಸಭೆಗೆ ವಿವರಗಳನ್ನು ನೀಡಿದರು. ಬೇಸಿಗೆ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾದ ರೀತಿಯನ್ನು ಸಭೆಯ ಮುಂದಿಟ್ಟರು.</p>.<p>‘ಬೇಸಿಗೆ ಆರಂಭವಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ನಿತ್ಯ ದೂರುಗಳು ಬರುತ್ತಿವೆ. ಆದಷ್ಟು ಬೇಗ ಜನರಿಗೆ ಸ್ಪಂದಿಸುವ ಅಗತ್ಯವಿದೆ. ಕೊಳವೆ ಬಾವಿ ಕೊರೆಸುವುದು ಸೇರಿ ಇತರ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸೂಚನೆ ನೀಡಿದರು.</p>.<p><span class="quote">ಏಜೆನ್ಸಿ ರದ್ಧತಿಗೆ ಸೂಚನೆ:</span>ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಿಸುವಲ್ಲಿ ವಿಫಲವಾದ ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಪಡಿಸಿ ಎಂದು ಶಶಿಕಲಾ ತಾಕೀತು ಮಾಡಿದರು.</p>.<p>‘ನಿರ್ವಹಣೆಯ ಗುತ್ತಿಗೆ ಪಡೆದ ಏಜೆನ್ಸಿಗೆ ನೀರಿನ ಹಣ ಸಂದಾಯವಾಗುತ್ತಿದೆ. ದುರಸ್ತಿಗೆ ಮಾಸಿಕ ₹ 3 ಸಾವಿರ ನೀಡಲಾಗುತ್ತಿದೆ. ಆದರೂ, ಹಲವು ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಕುಡಿಯಲು ನೀರು ಕೊಡದೇ ಇದ್ದರೆ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ. ಹೊಣೆಗಾರಿಕೆ ಅರಿತು ಕೆಲಸ ಮಾಡಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿರುವ 1,052 ಘಟಕಗಳಲ್ಲಿ 991 ಘಟಕ ಕಾರ್ಯನಿರ್ವಹಿಸುತ್ತಿವೆ. 20 ಲೀಟರ್ ನೀರಿಗೆ ₹ 5 ನಿಗದಿ ಮಾಡಲಾಗಿದೆ. ₹ 5 ಬದಲು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತಿರುವ ಇಲಾಖೆಯ ಕ್ರಮಕ್ಕೆ ಅಧ್ಯಕ್ಷರು ವಿರೋಧ ವ್ಯಕ್ತಪಡಿಸಿದರು.</p>.<p>‘ಕೂಲಿ ಕಾರ್ಮಿಕ ಕುಟುಂಬ ಸ್ಮಾರ್ಟ್ ಕಾರ್ಡ್ ಹೊಂದುವುದು ಕಷ್ಟ. ಮೊದಲೇ ಹಣ ಕೊಟ್ಟು ರಿಚಾರ್ಜ್ ಮಾಡಿಸಿಕೊಳ್ಳಲು ಆಗದು. ₹ 5 ಕಾಯಿನ್ ವ್ಯವಸ್ಥೆಯೇ ಇರಲಿ. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದು ಬೇಡ’ ಎಂದರು.</p>.<p><span class="quote">ಪ್ರಯೋಗಾಲ ಸೇರಿದ ಔಷಧ:</span>ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ರೋಗನಿರೋಧ ಶಕ್ತಿ ಹೆಚ್ಚಿಸಬಲ್ಲ ಔಷಧ ಖರೀದಿಸಿದ ಆಯುರ್ವೇದ ಇಲಾಖೆ, ಬಳಕೆಗೆ ಪ್ರಯೋಗಾಲಯದ ಅನುಮತಿಗೆ ಒಂದೂವರೆ ತಿಂಗಳಿಂದ ಕಾಯುತ್ತಿರುವ ಸಂಗತಿ ಸಭೆಯಲ್ಲಿ ಬೆಳಕಿಗೆ ಬಂದಿತು.</p>.<p>ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲ ಔಷಧ ಹಾಗೂ ಮಾತ್ರಗಳನ್ನು ಖರೀದಿಸಲು ಜಿಲ್ಲಾ ಪಂಚಾಯಿತಿ ₹ 32 ಲಕ್ಷ ಅನುದಾನ ನೀಡಿದೆ. ಆಯುರ್ವೇದ ಇಲಾಖೆ ಔಷಧ ಖರೀದಿಸಿದೆ. ಆದರೆ, ಇದನ್ನು ಸಾರ್ವಜನಿಕರಿಗೆ ವಿತರಿಸುವುದಕ್ಕೂ ಮೊದಲು ಪ್ರಯೋಗಾಲಯದ ಅನುಮತಿ ಪಡೆಯುವುದು ಕಡ್ಡಾಯ.</p>.<p>‘ಔಷಧಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಒಂದೂವರೆ ತಿಂಗಳು ಕಳೆದಿದೆ. ರಾಜ್ಯಕ್ಕೆ ಒಂದೇ ಪ್ರಯೋಗಾಲಯ ಇರುವುದರಿಂದ ಕಾರ್ಯದ ಒತ್ತಡ ಹೆಚ್ಚಾಗಿದೆ. ಹೀಗಾಗಿ, ಅನುಮತಿ ಸಿಗುತ್ತಿಲ್ಲ’ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ವಿಶ್ವನಾಥ್ ತಿಳಿಸಿದರು.</p>.<p>ಉಪಾಧ್ಯಕ್ಷೆ ವಿಜಯಲಕ್ಷ್ಮಿ ಪ್ರಕಾಶ್ ಇದ್ದರು.</p>.<p>***</p>.<p>ಆರ್ಒ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಹಸ್ತಾಂತರಿಸುವಾಗ ದುರಸ್ತಿಗೆ ಸೂಚಿಸಲಾಗಿತ್ತು. ಪಿಡಿಒಗಳ ನೆರವು ಪಡೆದು ಎಲ್ಲ ಘಟಕ ಸರಿಪಡಿಸಲಾಗುವುದು.</p>.<p><strong>ಡಾ.ಕೆ.ನಂದಿನಿದೇವಿ, ಸಿಇಒ, ಜಿಲ್ಲಾ ಪಂಚಾಯಿತಿ</strong></p>.<p>***</p>.<p>ಸೀಬಾರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಬಿಂದಿಗೆ ನೀರು ಬಳಕೆ ಆಗಿಲ್ಲ. ಆದರೆ, ದುರಸ್ತಿಯ ಲೆಕ್ಕ ಬರೆಯಲಾಗಿದೆ. ಖಾಸಗಿ ಘಟಕಗಳಂತೆ ಸರ್ಕಾರಿ ಘಟಕ ಕಾರ್ಯನಿರ್ವಹಿಸಬೇಕು.</p>.<p><strong>ಆರ್.ನರಸಿಂಹರಾಜು, ಅಧ್ಯಕ್ಷ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>