<p><strong>ಚಿತ್ರದುರ್ಗ: </strong>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡದೆ ಅಪಮಾನ ಮಾಡಿದ್ದಾರೆ ಎಂದು ದಸಂಸ (ದಾದಾ ಸಾಹೇಬ್ ಡಾ.ಎನ್. ಮೂರ್ತಿ ಸ್ಥಾಪಿತ) ವಿಭಾಗೀಯ ಯುವ ಘಟಕದ ಅಧ್ಯಕ್ಷ ಎಸ್.ಎನ್.ವಿಶ್ವನಾಥಮೂರ್ತಿ ಖಂಡಿಸಿದ್ದಾರೆ.</p>.<p>ವಿಶ್ವವೇ ಒಪ್ಪಿಕೊಳ್ಳುವಂತಹ ಮಹಾನ್ ಮಾನವತಾವಾದಿ, ಎಲ್ಲಾ ಸಮುದಾಯಕ್ಕೆ ಮಾರ್ಗದರ್ಶಕರಾಗಿ ಸಮಾಜ ಸುಧಾರಣೆ ಮಾಡಿದಂತ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ, ಬಿಜೆಪಿ ಮುಖಂಡರು ಅಗೌರವ ತೋರಿದ್ದಾರೆ ಎಂದು ಆರೋಪಿಸಿದರು.</p>.<p>ದೇಶದ ಸಾರ್ವಭೌಮತೆಯನ್ನು, ರಾಷ್ಟ್ರ ನಾಯಕರನ್ನು ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಗೌರವಿಸಬೇಕು. ಆದರೆ, ಶಾ ಅವರು ಮದಕರಿನಾಯಕರ ಹಾಗೂ ಒನಕೆ ಓಬವ್ವಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಂಬೇಡ್ಕರ್ ಅವರಿಗೆ ಮಾಡದೆ ತಾರತಮ್ಯದಿಂದ ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ರಾಷ್ಟ್ರೀಯ ಪಕ್ಷವೊಂದರ ಅಧ್ಯಕ್ಷರಾಗಿರುವ ಬದಲು ಸಾರ್ವಜನಿಕ ರಂಗ ಈ ಕೂಡಲೇ ತೊರೆದು ಮನೆ, ಕುಟುಂಬಕ್ಕೆ ಸೀಮಿತರಾಗಿರುವುದು ಉತ್ತಮ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡದೆ ಅಪಮಾನ ಮಾಡಿದ್ದಾರೆ ಎಂದು ದಸಂಸ (ದಾದಾ ಸಾಹೇಬ್ ಡಾ.ಎನ್. ಮೂರ್ತಿ ಸ್ಥಾಪಿತ) ವಿಭಾಗೀಯ ಯುವ ಘಟಕದ ಅಧ್ಯಕ್ಷ ಎಸ್.ಎನ್.ವಿಶ್ವನಾಥಮೂರ್ತಿ ಖಂಡಿಸಿದ್ದಾರೆ.</p>.<p>ವಿಶ್ವವೇ ಒಪ್ಪಿಕೊಳ್ಳುವಂತಹ ಮಹಾನ್ ಮಾನವತಾವಾದಿ, ಎಲ್ಲಾ ಸಮುದಾಯಕ್ಕೆ ಮಾರ್ಗದರ್ಶಕರಾಗಿ ಸಮಾಜ ಸುಧಾರಣೆ ಮಾಡಿದಂತ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ, ಬಿಜೆಪಿ ಮುಖಂಡರು ಅಗೌರವ ತೋರಿದ್ದಾರೆ ಎಂದು ಆರೋಪಿಸಿದರು.</p>.<p>ದೇಶದ ಸಾರ್ವಭೌಮತೆಯನ್ನು, ರಾಷ್ಟ್ರ ನಾಯಕರನ್ನು ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಗೌರವಿಸಬೇಕು. ಆದರೆ, ಶಾ ಅವರು ಮದಕರಿನಾಯಕರ ಹಾಗೂ ಒನಕೆ ಓಬವ್ವಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಂಬೇಡ್ಕರ್ ಅವರಿಗೆ ಮಾಡದೆ ತಾರತಮ್ಯದಿಂದ ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ರಾಷ್ಟ್ರೀಯ ಪಕ್ಷವೊಂದರ ಅಧ್ಯಕ್ಷರಾಗಿರುವ ಬದಲು ಸಾರ್ವಜನಿಕ ರಂಗ ಈ ಕೂಡಲೇ ತೊರೆದು ಮನೆ, ಕುಟುಂಬಕ್ಕೆ ಸೀಮಿತರಾಗಿರುವುದು ಉತ್ತಮ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>