<p>ಚಿತ್ರದುರ್ಗ: ಅನುದಾನಿತ ಶಾಲೆಯಲ್ಲಿ ಹದಿನಾರು ತಿಂಗಳಿಂದ ವೇತನ ನೀಡಿಲ್ಲ. ಜಿಲ್ಲೆಯಲ್ಲಿನ ಶಿಕ್ಷಕರ ವೈದ್ಯಕೀಯ ಮರುಪಾವತಿ ಆಗಿಲ್ಲ ಮುಂತಾದ ಸಮಸ್ಯೆಗಳನ್ನು ಶಿಕ್ಷಕರ ಅದಾಲತ್ನಲ್ಲಿ ಶಿಕ್ಷಕರು ಮಂಡಿಸಿದರು.<br /> <br /> ನಗರದ ಗುರುಭವನದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ನಿರ್ದೆಶಕ ಜಿ.ವಿ. ದಿವಾಕರ ಸಮ್ಮುಖದಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗದ ಶಿಕ್ಷಕರು ತಮ್ಮ ಅಹವಾಲುಗಳನ್ನು ತೋಡಿಕೊಂಡರು.<br /> <br /> ಶಿಕ್ಷಕರ ಸೇವಾ ಮಾಹಿತಿಯನ್ನು ಇಲಾಖೆಯಿಂದಲ್ಲೇ ನಿರ್ವಹಿಸಬೇಕು. ಸಿಆರ್ಸಿ ಮತ್ತು ಬಿಆರ್ಸಿ ಹುದ್ದೆಗಳಿಗೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಕೋರಿದರು.<br /> <br /> ಚಿತ್ರದುರ್ಗ ನಗರದ ಗುಮಾಸ್ತ ಕಾಲೊನಿಯ ಶರಣ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಉಷಾರಾಣಿಗೆ ಆಡಳಿತ ಮಂಡಳಿ ಕಳೆದ 16 ತಿಂಗಳಿಂದ ವೇತನ ನೀಡಿಲ್ಲ. ಈ ಬಗ್ಗೆ ಇಲಾಖೆಯ ಗಮನಕ್ಕೆ ತಂದಿದ್ದರೂ, ಆಡಳಿತ ಮಂಡಳಿ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ ಎಂದು ಅಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು. <br /> <br /> ಶಿಕ್ಷಕಿಯ ಸಮಸ್ಯೆ ಆಲಿಸಿದ ಅಧಿಕಾರಿಗಳ ವರ್ಗ ಈ ಸಂಬಂಧ ಆಡಳಿತ ಮಂಡಳಿಗೆ ಮತ್ತೊಮ್ಮೆ ನೋಟಿಸ್ ನೀಡಿ ಆಗಲೂ ಸಮಸ್ಯೆ ಪರಿಹಾರವಾಗದಿದ್ದರೆ, ಶಾಲೆಗೆ ನೀಡುವ ಅನುದಾನವನ್ನು ನಿಲ್ಲಿಸುವ ಬಗ್ಗೆ ಚಿಂತಿಸಲಾಗುವುದೆಂದು ದಿವಾಕರ್ ತಿಳಿಸಿದರು.<br /> <br /> ಸರ್ಕಾರ 2008- 09ರಲ್ಲಿ ಪ್ರೌಢ ಶಾಲಾ ಶಿಕ್ಷಕರಾಗಿ ಆಯ್ಕೆ ಮಾಡಿದ್ದರೂ ಈವರೆಗೂ ನೇಮಕಾತಿ ನೀಡಿಲ್ಲ. ಈ ಸಂಬಂಧ ಸುಮಾರು 99 ಅಂಗವಿಕಲರು ಇದ್ದಾರೆ. ಅವರು ಬೇರೆ ಸ್ಥಳದಲ್ಲಿ ಕೆಲಸಕ್ಕೆ ಹೋಗಲು ಸಾಧ್ಯವಿಲ್ಲದೆ, ಸರ್ಕಾರದಿಂದ ನೇಮಕಾತಿಯ ಆದೇಶವೂ ಬಾರದೇ ತ್ರಿಶಂಕು ಸ್ಥಿತಿಯನ್ನು ಅನುಭವಿಸುವಂತಾಗಿದೆ ಎಂದು ಮನವಿ ಮಾಡಿದರು.<br /> <br /> ಹೊಸದುರ್ಗ ತಾಲ್ಲೂಕಿನ ದೇವಿಗೆರೆ ಗ್ರಾಮದಲ್ಲಿ ನಡೆಯುತ್ತಿರುವ ಲಕ್ಷ್ಮೀ ನರಸಿಂಹ ಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಆಡಳಿತ ಮಂಡಳಿ ಸರಿಯಾದ ರೀತಿಯಲ್ಲಿ ಶಾಲೆ ನಡೆಸುತ್ತಿಲ್ಲ ಎಂದು ಸರ್ಕಾರ ಕಳೆದ 4 ವರ್ಷಗಳಿಂದಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಅವರನ್ನು ಹಿಂಪಡೆಯದೆ ಮುಂದುವರಿಸುವಂತೆ ಶಿಕ್ಷಕ ಕರಿಯಪ್ಪ ಕೋರಿದರು.<br /> <br /> ಶಿಕ್ಷಣ ಇಲಾಖೆಯ ನಿರ್ದೇಶಕ ಹನುಮಂತರಾಯಪ್ಪ, ಪ್ರಾಥಮಿಕ ನಿರ್ದೇಶಕ ದೇವ ಪ್ರಕಾಶ್ ಮತ್ತು ಸಹ ನಿರ್ದೇಶಕ ಚಾರಣ್, ಉಪ ನಿರ್ದೇಶಕ ಮಂಜುನಾಥ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಅನುದಾನಿತ ಶಾಲೆಯಲ್ಲಿ ಹದಿನಾರು ತಿಂಗಳಿಂದ ವೇತನ ನೀಡಿಲ್ಲ. ಜಿಲ್ಲೆಯಲ್ಲಿನ ಶಿಕ್ಷಕರ ವೈದ್ಯಕೀಯ ಮರುಪಾವತಿ ಆಗಿಲ್ಲ ಮುಂತಾದ ಸಮಸ್ಯೆಗಳನ್ನು ಶಿಕ್ಷಕರ ಅದಾಲತ್ನಲ್ಲಿ ಶಿಕ್ಷಕರು ಮಂಡಿಸಿದರು.<br /> <br /> ನಗರದ ಗುರುಭವನದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ನಿರ್ದೆಶಕ ಜಿ.ವಿ. ದಿವಾಕರ ಸಮ್ಮುಖದಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗದ ಶಿಕ್ಷಕರು ತಮ್ಮ ಅಹವಾಲುಗಳನ್ನು ತೋಡಿಕೊಂಡರು.<br /> <br /> ಶಿಕ್ಷಕರ ಸೇವಾ ಮಾಹಿತಿಯನ್ನು ಇಲಾಖೆಯಿಂದಲ್ಲೇ ನಿರ್ವಹಿಸಬೇಕು. ಸಿಆರ್ಸಿ ಮತ್ತು ಬಿಆರ್ಸಿ ಹುದ್ದೆಗಳಿಗೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಕೋರಿದರು.<br /> <br /> ಚಿತ್ರದುರ್ಗ ನಗರದ ಗುಮಾಸ್ತ ಕಾಲೊನಿಯ ಶರಣ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಉಷಾರಾಣಿಗೆ ಆಡಳಿತ ಮಂಡಳಿ ಕಳೆದ 16 ತಿಂಗಳಿಂದ ವೇತನ ನೀಡಿಲ್ಲ. ಈ ಬಗ್ಗೆ ಇಲಾಖೆಯ ಗಮನಕ್ಕೆ ತಂದಿದ್ದರೂ, ಆಡಳಿತ ಮಂಡಳಿ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ ಎಂದು ಅಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು. <br /> <br /> ಶಿಕ್ಷಕಿಯ ಸಮಸ್ಯೆ ಆಲಿಸಿದ ಅಧಿಕಾರಿಗಳ ವರ್ಗ ಈ ಸಂಬಂಧ ಆಡಳಿತ ಮಂಡಳಿಗೆ ಮತ್ತೊಮ್ಮೆ ನೋಟಿಸ್ ನೀಡಿ ಆಗಲೂ ಸಮಸ್ಯೆ ಪರಿಹಾರವಾಗದಿದ್ದರೆ, ಶಾಲೆಗೆ ನೀಡುವ ಅನುದಾನವನ್ನು ನಿಲ್ಲಿಸುವ ಬಗ್ಗೆ ಚಿಂತಿಸಲಾಗುವುದೆಂದು ದಿವಾಕರ್ ತಿಳಿಸಿದರು.<br /> <br /> ಸರ್ಕಾರ 2008- 09ರಲ್ಲಿ ಪ್ರೌಢ ಶಾಲಾ ಶಿಕ್ಷಕರಾಗಿ ಆಯ್ಕೆ ಮಾಡಿದ್ದರೂ ಈವರೆಗೂ ನೇಮಕಾತಿ ನೀಡಿಲ್ಲ. ಈ ಸಂಬಂಧ ಸುಮಾರು 99 ಅಂಗವಿಕಲರು ಇದ್ದಾರೆ. ಅವರು ಬೇರೆ ಸ್ಥಳದಲ್ಲಿ ಕೆಲಸಕ್ಕೆ ಹೋಗಲು ಸಾಧ್ಯವಿಲ್ಲದೆ, ಸರ್ಕಾರದಿಂದ ನೇಮಕಾತಿಯ ಆದೇಶವೂ ಬಾರದೇ ತ್ರಿಶಂಕು ಸ್ಥಿತಿಯನ್ನು ಅನುಭವಿಸುವಂತಾಗಿದೆ ಎಂದು ಮನವಿ ಮಾಡಿದರು.<br /> <br /> ಹೊಸದುರ್ಗ ತಾಲ್ಲೂಕಿನ ದೇವಿಗೆರೆ ಗ್ರಾಮದಲ್ಲಿ ನಡೆಯುತ್ತಿರುವ ಲಕ್ಷ್ಮೀ ನರಸಿಂಹ ಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಆಡಳಿತ ಮಂಡಳಿ ಸರಿಯಾದ ರೀತಿಯಲ್ಲಿ ಶಾಲೆ ನಡೆಸುತ್ತಿಲ್ಲ ಎಂದು ಸರ್ಕಾರ ಕಳೆದ 4 ವರ್ಷಗಳಿಂದಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಅವರನ್ನು ಹಿಂಪಡೆಯದೆ ಮುಂದುವರಿಸುವಂತೆ ಶಿಕ್ಷಕ ಕರಿಯಪ್ಪ ಕೋರಿದರು.<br /> <br /> ಶಿಕ್ಷಣ ಇಲಾಖೆಯ ನಿರ್ದೇಶಕ ಹನುಮಂತರಾಯಪ್ಪ, ಪ್ರಾಥಮಿಕ ನಿರ್ದೇಶಕ ದೇವ ಪ್ರಕಾಶ್ ಮತ್ತು ಸಹ ನಿರ್ದೇಶಕ ಚಾರಣ್, ಉಪ ನಿರ್ದೇಶಕ ಮಂಜುನಾಥ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>