‘ಕೊರೊನಾ ಭಯಾನಕ ಕಾಯಿಲೆಯಾಗಿದೆ. ಇದರಿಂದ ಸ್ವಯಂ ರಕ್ಷಿಸಿಕೊಳ್ಳಲು ನಾವೆಲ್ಲರೂ ಸರ್ಕಾರ ಸೂಚಿಸಿರುವ ಮಾರ್ಗ ಸೂಚಿಗಳನ್ನು ತಪ್ಪದೇ ಪಾಲಿಸಬೇಕಿದೆ. ಶೀತ, ಕೆಮ್ಮು, ಜ್ವರದ ಲಕ್ಷಣ ಕಂಡು ಬಂದಲ್ಲಿ ನಿರ್ಲಕ್ಷ್ಯೆ ಮಾಡದೇ ಸಮೀಪದ ಅಸ್ಪತ್ರೆಗೆ ಭೇಟಿ ನೀಡಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಸ್ವಾಮೀಜಿ ಸಲಹೆ ನೀಡಿದರು.
‘ಅಲೆಮಾರಿ, ಕಿನ್ನರಿ ಜೋಗಿಗಳು ಈಗಾಗಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಗುಡಿಸಲು ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಕುಡಿಯುವ ನೀರು ಸೇರಿ ಮೂಲಸೌಕರ್ಯ ಕೊರತೆ ಕಂಡು ಬರುತ್ತಿದೆ. ಆದ್ದರಿಂದ ತುರ್ತಾಗಿ ಸಮಸ್ಯೆ ಪರಿಹರಿಸಲು ಮುಂದಾಗಿ’ ಎಂದು ಇದೇ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಪಿಡಿಒಗೆ ಸೂಚನೆ ನೀಡಿದರು.
ಶಾಂತಿ ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ಕುಮಾರ್, ವಿಮುಕ್ತಿ ವಿದ್ಯಾಸಂಸ್ಥೆಯ ನಿರ್ದೇಶಕ ಆರ್. ವಿಶ್ವಸಾಗರ್, ಸಂಯೋಜಕ ಕುಮಾರ್, ಟಿ. ಅರಣ್ಯಸಾಗರ್, ಆಯುಷ್ ವೈದ್ಯ ಡಾ. ಶಿವಣ್ಣ ಮಾಸ್ಟರ್ ಇದ್ದರು.