‘ಸದಾಶಿವ ವರದಿ ಅನುಷ್ಠಾನದಿಂದ ಭೋವಿ, ಲಂಬಾಣಿ, ಕೊರಚ ಜನಾಂಗವನ್ನು ಪರಿಶಿಷ್ಟ ಜಾತಿಯಿಂದ ಹೊರ ಹಾಕಲಾಗುತ್ತದೆ ಎಂಬ ತಪ್ಪು ಮಾಹಿತಿಯಿಂದಾಗಿ, ಆ ಸಮುದಾಯದವರು ಒಳಮೀಸಲಾತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ ಪ್ರಕಾರ ಯಾವುದೇ ಆಯೋಗಕ್ಕಾಗಲಿ, ರಾಜ್ಯ ಸರ್ಕಾರಕ್ಕಾಗಲಿ ಒಂದು ಜಾತಿಯನ್ನು ಸೇರಿಸುವ ಅಥವಾ ತೆಗೆಯುವುದಕ್ಕೆ ಅಧಿಕಾರ ಇರುವುದಿಲ್ಲ. ಕೇಂದ್ರ ನೀಡುವ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವುದಷ್ಟೇ ನಮ್ಮ ಕೆಲಸ. ಹಾಗಾಗಿ ಈ ವಿಚಾರದಲ್ಲಿ ಆ ಸಮುದಾಯದವರು ಭಯಪಡಬೇಕಾಗಿಲ್ಲ’ ಎಂದು ಅವರು ಹೇಳಿದರು.