ಮೊಳಕಾಲ್ಮುರು: ‘ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಸಂಸದ ಎನ್.ವೈ.ಹನುಮಂತಪ್ಪ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ಹುದ್ದೆ ನೀಡಿ ಕಾಂಗ್ರೆಸ್ ಸಾಮಾಜಿಕ ನ್ಯಾಯ ಮೆರೆದಿದೆ’ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ. ಪ್ರಕಾಶ್ ಹೇಳಿದರು.
ನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೊಳಕಾಲ್ಮುರಿನಂತಹ ಗಡಿ, ಹಿಂದುಳಿದ ತಾಲ್ಲೂಕಿಗೆ ಸೇರಿದ ಹನುಮಂತಪ್ಪ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಈ ಭಾಗದ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ. ನಾಯಕ ಜನಾಂಗಕ್ಕೆ ರಾಜಕೀಯ ಪ್ರಾಬಲ್ಯವೂ ನೀಡಿದಂತಾಗಿದೆ.
ಇದನ್ನು ಕಾರ್ಯಕರ್ತರು ಹಾಗೂ ಮುಖಂಡರು ಸದುಪಯೋಗ ಮಾಡಿಕೊಂಡು ಪಕ್ಷದ ಬೆಳವಣಿಗೆಗೆ ಸಹಕಾರ ನೀಡಬೇಕು’ ಎಂದು ಹೇಳಿದರು. ‘ಎನ್ವೈಎಚ್ ಸಂಸದರಾಗಿದ್ದಾಗ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿ ಮಾಡಿಸಿದರು. ಕುದಾಪುರ, ದೊಡ್ಡ ಉಳ್ಳಾರ್ತಿಯಲ್ಲಿ ವಿಜ್ಞಾನಕೇಂದ್ರಗಳ ಸ್ಥಾಪನೆಯಲ್ಲಿ ಅವರ ಶ್ರಮ ಅಪಾರ’ ಎಂದರು.