<p><strong>ಚಿತ್ರದುರ್ಗ: </strong>ಕುಡಿಯುವ ನೀರು ಮತ್ತು ಸಮರ್ಪಕ ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ನಗರಸಭೆ ವಿಫಲವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ 12ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಧರಣಿ ನಡೆಸಿದರು.<br /> <br /> ಚೋಳಗುಡ್ಡ ಸುತ್ತಮುತ್ತ ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತದೆ. ಕೆಲವೊಮ್ಮೆ ಅದೂ ಕಷ್ಟ. ಇದರಿಂದ ನಾಗರಿಕರು ಪರದಾಡಬೇಕಾಗಿದೆ. ಬೇಸಿಗೆಯ ಈ ದಿನಗಳಲ್ಲಿ ಬಡಾವಣೆಯ ನಿವಾಸಿಗಳು ನೀರಿಲ್ಲದೆ ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಆದರೆ, ನಗರಸಭೆ ನಿರ್ಲಕ್ಷ್ಯ ಧೋರಣೆ ತಳೆದಿದೆ. ಬಡಾವಣೆಯ ಸಮಸ್ಯೆಗಳನ್ನು ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.<br /> <br /> ಈ ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ನಿಯಮಿತವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುವುದಿಲ್ಲ. ಕಸ ವಿಲೇವಾರಿಯನ್ನೇ ಈ ಪ್ರದೇಶದಲ್ಲಿ ಕೈಗೊಳ್ಳುತ್ತಿಲ್ಲ. ಇದರಿಂದ ಕಸದ ರಾಶಿ ಸೃಷ್ಟಿಯಾಗಿ ಸೊಳ್ಳೆ ಮತ್ತು ಹಂದಿಗಳ ತಾಣವಾಗುತ್ತಿದ್ದು, ರೋಗರುಜಿನಗಳು ಹರಡಲು ಕಾರಣವಾಗಿದೆ. ಸ್ವಚ್ಛತೆ ಕಾಪಾಡಲು ನಗರಸಭೆಗೆ ಸೂಚಿಸಬೇಕು ಎಂದು ಆಗ್ರಹಿಸಿದರು.<br /> <br /> ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸಬೇಕು. ತಿಂಗಳಿಗೆ ಒಮ್ಮೆಯಾದರೂ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು, ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಜಿಲ್ಲಾಧಿಕಾರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.<br /> <br /> ಧರಣಿಯಲ್ಲಿ ಜಬೀವುಲ್ಲಾ, ತಿಪ್ಪೇಸ್ವಾಮಿ, ಷಫಿವುಲ್ಲಾ, ಸರ್ದಾರ್, ಗುಹೇಶ್ವರಪ್ಪ, ಪ್ರೇಮಾ, ನೇತ್ರಾ, ಮಂಜುಳಾ, ಲಲಿತಮ್ಮ, ಶಾರದಮ್ಮ, ಸಿದ್ದಮ್ಮ, ಯಶೋಧಮ್ಮ, ಟಿ. ಶಿವಮೂರ್ತಿ, ಟಿ. ವೀಣಾ, ನೀಲಮ್ಮ, ಬಿ.ಆರ್. ಸಂಧ್ಯಾ, ಸೀಮಾ, ಶಕುಂತಲಮ್ಮ, ಕಲಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕುಡಿಯುವ ನೀರು ಮತ್ತು ಸಮರ್ಪಕ ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ನಗರಸಭೆ ವಿಫಲವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ 12ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಧರಣಿ ನಡೆಸಿದರು.<br /> <br /> ಚೋಳಗುಡ್ಡ ಸುತ್ತಮುತ್ತ ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತದೆ. ಕೆಲವೊಮ್ಮೆ ಅದೂ ಕಷ್ಟ. ಇದರಿಂದ ನಾಗರಿಕರು ಪರದಾಡಬೇಕಾಗಿದೆ. ಬೇಸಿಗೆಯ ಈ ದಿನಗಳಲ್ಲಿ ಬಡಾವಣೆಯ ನಿವಾಸಿಗಳು ನೀರಿಲ್ಲದೆ ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಆದರೆ, ನಗರಸಭೆ ನಿರ್ಲಕ್ಷ್ಯ ಧೋರಣೆ ತಳೆದಿದೆ. ಬಡಾವಣೆಯ ಸಮಸ್ಯೆಗಳನ್ನು ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.<br /> <br /> ಈ ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ನಿಯಮಿತವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುವುದಿಲ್ಲ. ಕಸ ವಿಲೇವಾರಿಯನ್ನೇ ಈ ಪ್ರದೇಶದಲ್ಲಿ ಕೈಗೊಳ್ಳುತ್ತಿಲ್ಲ. ಇದರಿಂದ ಕಸದ ರಾಶಿ ಸೃಷ್ಟಿಯಾಗಿ ಸೊಳ್ಳೆ ಮತ್ತು ಹಂದಿಗಳ ತಾಣವಾಗುತ್ತಿದ್ದು, ರೋಗರುಜಿನಗಳು ಹರಡಲು ಕಾರಣವಾಗಿದೆ. ಸ್ವಚ್ಛತೆ ಕಾಪಾಡಲು ನಗರಸಭೆಗೆ ಸೂಚಿಸಬೇಕು ಎಂದು ಆಗ್ರಹಿಸಿದರು.<br /> <br /> ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸಬೇಕು. ತಿಂಗಳಿಗೆ ಒಮ್ಮೆಯಾದರೂ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು, ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಜಿಲ್ಲಾಧಿಕಾರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.<br /> <br /> ಧರಣಿಯಲ್ಲಿ ಜಬೀವುಲ್ಲಾ, ತಿಪ್ಪೇಸ್ವಾಮಿ, ಷಫಿವುಲ್ಲಾ, ಸರ್ದಾರ್, ಗುಹೇಶ್ವರಪ್ಪ, ಪ್ರೇಮಾ, ನೇತ್ರಾ, ಮಂಜುಳಾ, ಲಲಿತಮ್ಮ, ಶಾರದಮ್ಮ, ಸಿದ್ದಮ್ಮ, ಯಶೋಧಮ್ಮ, ಟಿ. ಶಿವಮೂರ್ತಿ, ಟಿ. ವೀಣಾ, ನೀಲಮ್ಮ, ಬಿ.ಆರ್. ಸಂಧ್ಯಾ, ಸೀಮಾ, ಶಕುಂತಲಮ್ಮ, ಕಲಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>