<p><strong>ಹೊಳಲ್ಕೆರೆ: </strong>ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಆದ್ಯತೆ ನೀಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ರಾಜಣ್ಣ ಸಲಹೆ ನೀಡಿದರು.ತಾಲ್ಲೂಕಿನ ರಾಮಗಿರಿ ಹೋಬಳಿ ಮುದ್ದಾಪುರ ಲಂಬಾಣಿಹಟ್ಟಿಯಲ್ಲಿ ಶನಿವಾರ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಶಿಕ್ಷಕ ಸದಾ ವಿದ್ಯಾರ್ಥಿ. ನಿರಂತರ ಅಧ್ಯಯನದ ಮೂಲಕ ಹೆಚ್ಚಿನ ವಿಷಯಗಳನ್ನು ಅರಿತು, ಬೋಧನೆಯಲ್ಲಿ ಅಳವಡಿಸಿ ಕೊಳ್ಳಬೇಕು. ಮಕ್ಕಳು ಆಕರ್ಷಿತರಾಗುವ ಕಲಿಕಾ ಸಾಮಗ್ರಿಗಳನ್ನು ತಯಾರಿಸಿಕೊಂಡು ಬೋಧಿಸಿದರೆ, ಕಲಿಕೆ ಪರಿಣಾಮಕಾರಿಯಾಗಿ ಇರುತ್ತದೆ ಎಂದರು.<br /> <br /> ಕಾರ್ಯಕ್ರಮ ಉದ್ಘಾಟಿಸಿದ ಗ್ರಾ.ಪಂ. ಸದಸ್ಯೆ ಭಾಗ್ಯಾಬಾಯಿ ಮತ್ತು ಜಯಾನಾಯ್ಕ ಅವರು ವಿದ್ಯಾರ್ಥಿಗಳಿಗೆ ಉಚಿತ ತಟ್ಟೆ, ಲೋಟ ವಿತರಿಸಿದರು. ಎಸ್ಡಿಎಂಸಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. <br /> ಮುಖ್ಯಶಿಕ್ಷಕ ಹಾಲಸ್ವಾಮಿ, ಬಿದರಕೆರೆ ಕೃಷ್ಣಪ್ಪ, ವಿನೋದಮ್ಮ, ಓಂಕಾರಪ್ಪ, ಉಮೇಶ ನಾಯ್ಕ, ಯಶೋದಮ್ಮ, ಮೂರ್ತಿ ನಾಯ್ಕ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ: </strong>ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಆದ್ಯತೆ ನೀಡಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ರಾಜಣ್ಣ ಸಲಹೆ ನೀಡಿದರು.ತಾಲ್ಲೂಕಿನ ರಾಮಗಿರಿ ಹೋಬಳಿ ಮುದ್ದಾಪುರ ಲಂಬಾಣಿಹಟ್ಟಿಯಲ್ಲಿ ಶನಿವಾರ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಶಿಕ್ಷಕ ಸದಾ ವಿದ್ಯಾರ್ಥಿ. ನಿರಂತರ ಅಧ್ಯಯನದ ಮೂಲಕ ಹೆಚ್ಚಿನ ವಿಷಯಗಳನ್ನು ಅರಿತು, ಬೋಧನೆಯಲ್ಲಿ ಅಳವಡಿಸಿ ಕೊಳ್ಳಬೇಕು. ಮಕ್ಕಳು ಆಕರ್ಷಿತರಾಗುವ ಕಲಿಕಾ ಸಾಮಗ್ರಿಗಳನ್ನು ತಯಾರಿಸಿಕೊಂಡು ಬೋಧಿಸಿದರೆ, ಕಲಿಕೆ ಪರಿಣಾಮಕಾರಿಯಾಗಿ ಇರುತ್ತದೆ ಎಂದರು.<br /> <br /> ಕಾರ್ಯಕ್ರಮ ಉದ್ಘಾಟಿಸಿದ ಗ್ರಾ.ಪಂ. ಸದಸ್ಯೆ ಭಾಗ್ಯಾಬಾಯಿ ಮತ್ತು ಜಯಾನಾಯ್ಕ ಅವರು ವಿದ್ಯಾರ್ಥಿಗಳಿಗೆ ಉಚಿತ ತಟ್ಟೆ, ಲೋಟ ವಿತರಿಸಿದರು. ಎಸ್ಡಿಎಂಸಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. <br /> ಮುಖ್ಯಶಿಕ್ಷಕ ಹಾಲಸ್ವಾಮಿ, ಬಿದರಕೆರೆ ಕೃಷ್ಣಪ್ಪ, ವಿನೋದಮ್ಮ, ಓಂಕಾರಪ್ಪ, ಉಮೇಶ ನಾಯ್ಕ, ಯಶೋದಮ್ಮ, ಮೂರ್ತಿ ನಾಯ್ಕ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>