<p><strong>ಚಿತ್ರದುರ್ಗ:</strong> ಪರಿಶಿಷ್ಟರಿಗೆ ಜಾತಿ ನಿಂದನೆ ಉಂಟಾದರೆ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಡಿ ಎಂಬುದಾಗಿ ನಾನು ಹೇಳಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದರು.<br /> <br /> ನಗರದ ವಾರ್ತಾ ಇಲಾಖೆ ಭವನದಲ್ಲಿ ಭಾನುವಾರ ಅವರು ಮಾತನಾಡಿದರು.<br /> <br /> `ದೌರ್ಜನ್ಯ ಪ್ರಕರಣ ದಾಖಲಿಸುವ ಮೊದಲು ನನ್ನ ಗಮನಕ್ಕೆ ತಂದು ನಂತರ ಪ್ರಕರಣ ದಾಖಲಿಸಿ ಎಂದು ಹೇಳಿದ್ದೆ. ನನ್ನ ಹೇಳಿಕೆಯನ್ನು ಬೇರೆಯವರು ಅರ್ಥೈಸಿಕೊಂಡಿಲ್ಲ. ಎಲ್ಲ ಜನಾಂಗದವರೊಂದಿಗೆ ದಲಿತರು ಸಹಬಾಳ್ವೆಯಿಂದ ಜೀವನ ನಡೆಸಿದಾಗ ಮಾತ್ರ ಸಮಾಜ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ' ಎಂದು ಸಚಿವರು ತಿಳಿಸಿದರು.<br /> <br /> `ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯಬಾರದು ಎನ್ನುವ ಉದ್ದೇಶದಿಂದ ಒಮ್ಮೆ ನನ್ನ ಗಮನಕ್ಕೆ ತನ್ನಿ ಎನ್ನುವುದಾಗಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದ್ದೆ' ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇತೂರಾಂ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಪರಿಶಿಷ್ಟರಿಗೆ ಜಾತಿ ನಿಂದನೆ ಉಂಟಾದರೆ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಡಿ ಎಂಬುದಾಗಿ ನಾನು ಹೇಳಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದರು.<br /> <br /> ನಗರದ ವಾರ್ತಾ ಇಲಾಖೆ ಭವನದಲ್ಲಿ ಭಾನುವಾರ ಅವರು ಮಾತನಾಡಿದರು.<br /> <br /> `ದೌರ್ಜನ್ಯ ಪ್ರಕರಣ ದಾಖಲಿಸುವ ಮೊದಲು ನನ್ನ ಗಮನಕ್ಕೆ ತಂದು ನಂತರ ಪ್ರಕರಣ ದಾಖಲಿಸಿ ಎಂದು ಹೇಳಿದ್ದೆ. ನನ್ನ ಹೇಳಿಕೆಯನ್ನು ಬೇರೆಯವರು ಅರ್ಥೈಸಿಕೊಂಡಿಲ್ಲ. ಎಲ್ಲ ಜನಾಂಗದವರೊಂದಿಗೆ ದಲಿತರು ಸಹಬಾಳ್ವೆಯಿಂದ ಜೀವನ ನಡೆಸಿದಾಗ ಮಾತ್ರ ಸಮಾಜ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ' ಎಂದು ಸಚಿವರು ತಿಳಿಸಿದರು.<br /> <br /> `ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯಬಾರದು ಎನ್ನುವ ಉದ್ದೇಶದಿಂದ ಒಮ್ಮೆ ನನ್ನ ಗಮನಕ್ಕೆ ತನ್ನಿ ಎನ್ನುವುದಾಗಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದ್ದೆ' ಎಂದು ಅವರು ಸ್ಪಷ್ಟಪಡಿಸಿದರು.<br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇತೂರಾಂ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>