<p><strong>ಚಿತ್ರದುರ್ಗ</strong>: `ನಗರದಲ್ಲಿ ಕಳವು, ಅಪಘಾತ ಪ್ರಕರಣಗಳ ನಿಯಂತ್ರಣದ ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆದ್ಯತೆ ನೀಡಲಾಗುವುದು' ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ.ಎಸ್.ರವಿಕುಮಾರ್ ತಿಳಿಸಿದರು.<br /> <br /> ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಆ ಪ್ರಕಾರ, ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ, ಚಿತ್ರದುರ್ಗ ಜಿಲ್ಲೆ ಶಾಂತಿ, ಸೌಹಾರ್ದತೆಯಿಂದ ಕೂಡಿದೆ' ಎಂದು ಹೇಳಿದರು.<br /> <br /> ಜಿಲ್ಲೆಯಲ್ಲಿ ಹಾದುಹೋಗಿರುವ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದರ ಬಗ್ಗೆ ಮಾಹಿತಿ ಇದೆ. ಇಂಥ ಸಮಸ್ಯೆಗಳಿಗೆ ಏಕಾಏಕಿ ಪರಿಹಾರ ನೀಡುವುದು ಕಷ್ಟ. ಅಪಘಾತವಾಗುತ್ತಿರುವ ಸ್ಥಳಗಳಲ್ಲಿ ಅಂಡರ್ಪಾಸ್, ಮೇಲು ಸೇತುವೆಗಳು ನಿರ್ಮಾಣವಾಗಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಇಲಾಖೆಯವರೊಂದಿಗೆ ಚರ್ಚಿಸಿ ಅಪಘಾತ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ' ಎಂದ ಭರವಸೆ ನೀಡಿದರು.<br /> <br /> `ಜಿಲ್ಲೆಯ ಹಿರಿಯೂರು, ಮೊಳಕಾಲ್ಮುರು, ಚಳ್ಳಕೆರೆ ತಾಲ್ಲೂಕುಗಳಲ್ಲಿ ಪೊಲೀಸರೇ ಅಕ್ರಮ ಮರಳು ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪಗಳಿವೆ' ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಚಾರ ತಮಗೆ ತಿಳಿದಿಲ್ಲ. ಒಂದು ವೇಳೆ ಪೊಲೀಸ್ ಇಲಾಖೆ ಅಕ್ರಮ ಮರಳು ಗಣಿಗಾರಿಕೆಗೆ ಸಹಕಾರ ನೀಡಿದ್ದು ಗಮನಕ್ಕೆ ಬಂದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಅಕ್ರಮ ಮರಳು ತಡೆಗೆ ಪೊಲೀಸ್ ಇಲಾಖೆಯಿಂದ ಬೇಕಾದ ಎಲ್ಲ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.<br /> <br /> ಹೆದ್ದಾರಿ ಬದಿಯಲ್ಲಿರುವ ಡಾಬಾಗಳ ಎದುರು ಪಾರ್ಕಿಂಗ್ ದಟ್ಟಣೆಯಾಗುತ್ತಿರುವ ಕುರಿತು ಮಾತನಾಡಿದ ರವಿಕುಮಾರ್ ಅವರು, `ಹೆದ್ದಾರಿ ಗಸ್ತು ತಿರುಗುವ ಪೊಲೀಸ್ ಅಧಿಕಾರಿಗಳಿಗೆ ಪಾರ್ಕಿಂಗ್ ತೆರವುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ' ತಿಳಿಸಿದರು.<br /> <br /> ನಗರದ ಪ್ರಮುಖ ರಸ್ತೆಬದಿಯಲ್ಲಿ ಪಾರ್ಕಿಂಗ್ ದಟ್ಟಣೆ, ಮುಖ್ಯ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ಗಳ ಅಸಮರ್ಪಕ ಕಾರ್ಯ ವೈಖರಿ ಹಾಗೂ ಪಾದಚಾರಿ ಮಾರ್ಗಕ್ಕೆ ಸ್ಥಳಾವಕಾಶ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ, ಜಿಲ್ಲಾಡಳಿತ ಹಾಗೂ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹರಿಸಲಾಗುವುದು' ಎಂದು ಹೇಳಿದರು.<br /> <br /> ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಮಾಹಿತಿ ನೀಡಲು ಅವರು ಕೋರಿದರು. ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ರಾತ್ರಿ ಪಾಳಿಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ನಾಗರಿಕರ ಸಹಯೋಗ ದೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಕಾರ್ಯಸೂಚಿ ರೂಪಿಸಲಾಗುವುದು. ಪೊಲೀಸ್ ಇಲಾಖೆಯ ಕಾರ್ಯಗಳಿಗೆ ನಾಗಕರಿಕರು ಹಾಗೂ ಮಾಧ್ಯಮದವರು ಸಹಕಾರ ನೀಡಬೇಕೆಂದು' ರವಿಕುಮಾರ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: `ನಗರದಲ್ಲಿ ಕಳವು, ಅಪಘಾತ ಪ್ರಕರಣಗಳ ನಿಯಂತ್ರಣದ ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆದ್ಯತೆ ನೀಡಲಾಗುವುದು' ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ.ಎಸ್.ರವಿಕುಮಾರ್ ತಿಳಿಸಿದರು.<br /> <br /> ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಆ ಪ್ರಕಾರ, ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ, ಚಿತ್ರದುರ್ಗ ಜಿಲ್ಲೆ ಶಾಂತಿ, ಸೌಹಾರ್ದತೆಯಿಂದ ಕೂಡಿದೆ' ಎಂದು ಹೇಳಿದರು.<br /> <br /> ಜಿಲ್ಲೆಯಲ್ಲಿ ಹಾದುಹೋಗಿರುವ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದರ ಬಗ್ಗೆ ಮಾಹಿತಿ ಇದೆ. ಇಂಥ ಸಮಸ್ಯೆಗಳಿಗೆ ಏಕಾಏಕಿ ಪರಿಹಾರ ನೀಡುವುದು ಕಷ್ಟ. ಅಪಘಾತವಾಗುತ್ತಿರುವ ಸ್ಥಳಗಳಲ್ಲಿ ಅಂಡರ್ಪಾಸ್, ಮೇಲು ಸೇತುವೆಗಳು ನಿರ್ಮಾಣವಾಗಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಇಲಾಖೆಯವರೊಂದಿಗೆ ಚರ್ಚಿಸಿ ಅಪಘಾತ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ' ಎಂದ ಭರವಸೆ ನೀಡಿದರು.<br /> <br /> `ಜಿಲ್ಲೆಯ ಹಿರಿಯೂರು, ಮೊಳಕಾಲ್ಮುರು, ಚಳ್ಳಕೆರೆ ತಾಲ್ಲೂಕುಗಳಲ್ಲಿ ಪೊಲೀಸರೇ ಅಕ್ರಮ ಮರಳು ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪಗಳಿವೆ' ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಚಾರ ತಮಗೆ ತಿಳಿದಿಲ್ಲ. ಒಂದು ವೇಳೆ ಪೊಲೀಸ್ ಇಲಾಖೆ ಅಕ್ರಮ ಮರಳು ಗಣಿಗಾರಿಕೆಗೆ ಸಹಕಾರ ನೀಡಿದ್ದು ಗಮನಕ್ಕೆ ಬಂದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಅಕ್ರಮ ಮರಳು ತಡೆಗೆ ಪೊಲೀಸ್ ಇಲಾಖೆಯಿಂದ ಬೇಕಾದ ಎಲ್ಲ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.<br /> <br /> ಹೆದ್ದಾರಿ ಬದಿಯಲ್ಲಿರುವ ಡಾಬಾಗಳ ಎದುರು ಪಾರ್ಕಿಂಗ್ ದಟ್ಟಣೆಯಾಗುತ್ತಿರುವ ಕುರಿತು ಮಾತನಾಡಿದ ರವಿಕುಮಾರ್ ಅವರು, `ಹೆದ್ದಾರಿ ಗಸ್ತು ತಿರುಗುವ ಪೊಲೀಸ್ ಅಧಿಕಾರಿಗಳಿಗೆ ಪಾರ್ಕಿಂಗ್ ತೆರವುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ' ತಿಳಿಸಿದರು.<br /> <br /> ನಗರದ ಪ್ರಮುಖ ರಸ್ತೆಬದಿಯಲ್ಲಿ ಪಾರ್ಕಿಂಗ್ ದಟ್ಟಣೆ, ಮುಖ್ಯ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ಗಳ ಅಸಮರ್ಪಕ ಕಾರ್ಯ ವೈಖರಿ ಹಾಗೂ ಪಾದಚಾರಿ ಮಾರ್ಗಕ್ಕೆ ಸ್ಥಳಾವಕಾಶ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಈ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ, ಜಿಲ್ಲಾಡಳಿತ ಹಾಗೂ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹರಿಸಲಾಗುವುದು' ಎಂದು ಹೇಳಿದರು.<br /> <br /> ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಮಾಹಿತಿ ನೀಡಲು ಅವರು ಕೋರಿದರು. ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ರಾತ್ರಿ ಪಾಳಿಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ನಾಗರಿಕರ ಸಹಯೋಗ ದೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಕಾರ್ಯಸೂಚಿ ರೂಪಿಸಲಾಗುವುದು. ಪೊಲೀಸ್ ಇಲಾಖೆಯ ಕಾರ್ಯಗಳಿಗೆ ನಾಗಕರಿಕರು ಹಾಗೂ ಮಾಧ್ಯಮದವರು ಸಹಕಾರ ನೀಡಬೇಕೆಂದು' ರವಿಕುಮಾರ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>