<p><strong>ಚಿತ್ರದುರ್ಗ: </strong>ಇದೇ 29ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಿರಿಯೂರಿಗೆ ಬರಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ.</p>.<p>‘ಅಮಿತ್ ಶಾ ಮೂರನೇ ಬಾರಿಗೆ ಜಿಲ್ಲೆಗೆ ಬರುತ್ತಿದ್ದಾರೆ. 29ರಂದು ಮಧ್ಯಾಹ್ನ 2 ಗಂಟೆಗೆ ಹಿರಿಯೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರಚಾರ ಸಭೆಯಲ್ಲಿ ಶಾ ಪಾಲ್ಗೊಳ್ಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದರು.</p>.<p>ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಯ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದರು.</p>.<p>ಸಂಜೆ 4ರವರೆಗೆ ಅಭ್ಯರ್ಥಿಗಳ ಪರ ಅಮಿತ್ ಶಾ ಮತಯಾಚಿಸಲಿದ್ದಾರೆ. ಜಿಲ್ಲೆಯಾದ್ಯಂತ ಸಹಸ್ರಾರು ಕಾರ್ಯಕರ್ತರು ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಜಿಲ್ಲಾ ಚುನಾವಣಾ ಸಂಚಾಲಕ ಸಿದ್ದೇಶ್ ಯಾದವ್, ಮಲ್ಲಿಕಾರ್ಜುನ್, ರತ್ನಮ್ಮ, ರೇವಣಸಿದ್ದಪ್ಪ, ಬೇದ್ರೆ ನಾಗರಾಜ್, ಲೀಲಾಧರ ಇದ್ದರು.</p>.<p><strong>‘ಮೋದಿ ಕಾರ್ಯಕ್ರಮ ನಿಗದಿಯಾಗಿಲ್ಲ’</strong></p>.<p>ಚಿತ್ರದುರ್ಗ ಜಿಲ್ಲೆಗೆ ಪ್ರಧಾನಿ ಮೋದಿ ಬರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅವರ ಅಧಿಕೃತ ಪ್ರವಾಸದ ಪಟ್ಟಿಯಲ್ಲಿ ಜಿಲ್ಲೆಯ ಕಾರ್ಯಕ್ರಮ ಇಲ್ಲ ಎಂದು ನವೀನ್ ಸ್ಪಷ್ಟಪಡಿಸಿದರು.</p>.<p>‘ಅಧಿಕೃತ ಪ್ರವಾಸದ ವೇಳಾಪಟ್ಟಿ ಪ್ರಕಾರ ಮೋದಿ ಅವರು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡುತ್ತಾರೆ. ಇದನ್ನು ಹೊರತುಪಡಿಸಿ, ಬೇರೆ ಯಾವ ಮಾಹಿತಿಯೂ ಸಿಕ್ಕಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಇದೇ 29ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಿರಿಯೂರಿಗೆ ಬರಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ.</p>.<p>‘ಅಮಿತ್ ಶಾ ಮೂರನೇ ಬಾರಿಗೆ ಜಿಲ್ಲೆಗೆ ಬರುತ್ತಿದ್ದಾರೆ. 29ರಂದು ಮಧ್ಯಾಹ್ನ 2 ಗಂಟೆಗೆ ಹಿರಿಯೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರಚಾರ ಸಭೆಯಲ್ಲಿ ಶಾ ಪಾಲ್ಗೊಳ್ಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದರು.</p>.<p>ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಯ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದರು.</p>.<p>ಸಂಜೆ 4ರವರೆಗೆ ಅಭ್ಯರ್ಥಿಗಳ ಪರ ಅಮಿತ್ ಶಾ ಮತಯಾಚಿಸಲಿದ್ದಾರೆ. ಜಿಲ್ಲೆಯಾದ್ಯಂತ ಸಹಸ್ರಾರು ಕಾರ್ಯಕರ್ತರು ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.</p>.<p>ಜಿಲ್ಲಾ ಚುನಾವಣಾ ಸಂಚಾಲಕ ಸಿದ್ದೇಶ್ ಯಾದವ್, ಮಲ್ಲಿಕಾರ್ಜುನ್, ರತ್ನಮ್ಮ, ರೇವಣಸಿದ್ದಪ್ಪ, ಬೇದ್ರೆ ನಾಗರಾಜ್, ಲೀಲಾಧರ ಇದ್ದರು.</p>.<p><strong>‘ಮೋದಿ ಕಾರ್ಯಕ್ರಮ ನಿಗದಿಯಾಗಿಲ್ಲ’</strong></p>.<p>ಚಿತ್ರದುರ್ಗ ಜಿಲ್ಲೆಗೆ ಪ್ರಧಾನಿ ಮೋದಿ ಬರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅವರ ಅಧಿಕೃತ ಪ್ರವಾಸದ ಪಟ್ಟಿಯಲ್ಲಿ ಜಿಲ್ಲೆಯ ಕಾರ್ಯಕ್ರಮ ಇಲ್ಲ ಎಂದು ನವೀನ್ ಸ್ಪಷ್ಟಪಡಿಸಿದರು.</p>.<p>‘ಅಧಿಕೃತ ಪ್ರವಾಸದ ವೇಳಾಪಟ್ಟಿ ಪ್ರಕಾರ ಮೋದಿ ಅವರು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡುತ್ತಾರೆ. ಇದನ್ನು ಹೊರತುಪಡಿಸಿ, ಬೇರೆ ಯಾವ ಮಾಹಿತಿಯೂ ಸಿಕ್ಕಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>