ಗುರುವಾರ ನ್ಯಾಯಾಲಯದಿಂದ ಅನುಮತಿ ಪಡೆದಿದ್ದ ಬಿಜೆಪಿ ಮುಖಂಡರು, ಬೆಳಿಗ್ಗೆ 11 ಗಂಟೆಯೊಳಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ವೇಳೆ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆಯೊಂದಿಗೆ ಹೊರಟಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್, ಮುಖಂಡರಾದ ಮಲ್ಲಿಕಾರ್ಜುನ್ ಅವರನ್ನು ಒಳಗೊಂಡಂತೆ ಪೊಲೀಸರು ತಡೆದು, ಕಪ್ಪು ಬಟ್ಟೆ ತೆಗೆಯುವಂತೆ ಸೂಚಿಸಿದರು. ಬಳಿಕ ಕಪ್ಪುಬಟ್ಟೆ ತೆಗೆದು ಮನವಿ ಸಲ್ಲಿಸಿದರು.