<p><strong>ನಾಯಕನಹಟ್ಟಿ: </strong>‘ಮಾ.19ರಂದು ನಡೆಯಲಿರುವ ತಿಪ್ಪೇರುದ್ರಸ್ವಾಮಿ ಜಾತ್ರೆಯ ವೇಳೆಗೆ ಹಿರೇಕೆರೆಯಿಂದ ನಾಯಕನಹಟ್ಟಿಗೆ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಹೇಳಿದರು.</p>.<p>ಸಮೀಪದ ಹಿರೇಕೆರೆಯಲ್ಲಿ ಶುಕ್ರವಾರ ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> ನಾಯಕನಹಟ್ಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.<br /> <br /> ಅವರಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ನಾಯಕನಹಟ್ಟಿ ಜನತೆಗೆ ಶಾಶ್ವತವಾಗಿ ನೀರಿನ ಬವಣೆ ನೀಗಿಸುವ ಸಲುವಾಗಿ ಹಿರೇಕೆರೆಯಲ್ಲಿ ಆರು ಬೋರ್ವೆಲ್ ಕೊರೆಸಿದ್ದು, ಅಲ್ಲಿಂದ ನಾಯಕನಹಟ್ಟಿಗೆ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.<br /> <br /> <strong>ಓಂ ವೃಕ್ಷ ವೃದ್ಧಿ ಆಶ್ರಮಕ್ಕೆ ಅನುದಾನ: </strong> ಸಮೀಪದ ಮಲ್ಲೋರ ಹಟ್ಟಿ ಯಲ್ಲಿರುವ ಓಂ ವೃಕ್ಷ ವೃದ್ಧಿ ಆಶ್ರಮದಲ್ಲಿ ಸಮುದಾಯ ಭವನ ನಿರ್ಮಿಸಲು ₨ 25 ಲಕ್ಷ ಅನುದಾನ ನೀಡಲಾಗುವುದು. ಹಾಗೆಯೇ ತಳುಕಿನಿಂದ ನಾಯಕನಹಟ್ಟಿ ವರೆಗಿನ ರಸ್ತೆಯನ್ನು ದ್ವಿ ಪಥವನ್ನಾಗಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಆರ್ಡಿಪಿಯಿಂದ 7 ಬೋರ್ವೆಲ್ ಕೊರೆಯಿಸ ಲಾಗಿದ್ದು, ಅಲ್ಲಿಂದ ಮೊಳಕಾಲ್ಮುರು ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುವುದು ಎಂದರು.<br /> <br /> ಗ್ರಾಮ ಪಂಚಾಯ್ತಿ ಅಧ್ಯಕ್ಷೆ ತಿಪ್ಪಮ್ಮ, ಸದಸ್ಯರಾದ ಪಾಲಯ್ಯ, ತಿಪ್ಪೇಸ್ವಾಮಿ, ಫಾಲಾಕ್ಷ ಮುಖಂಡ ರಾದ ಗುರುಲಿಂಗಯ್ಯ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಸೈಯದ್ ಅನ್ವರ್, ಮಹಾಂತೇಶ್, ಕೌಸರ್ ಭಾಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>‘ಮಾ.19ರಂದು ನಡೆಯಲಿರುವ ತಿಪ್ಪೇರುದ್ರಸ್ವಾಮಿ ಜಾತ್ರೆಯ ವೇಳೆಗೆ ಹಿರೇಕೆರೆಯಿಂದ ನಾಯಕನಹಟ್ಟಿಗೆ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಹೇಳಿದರು.</p>.<p>ಸಮೀಪದ ಹಿರೇಕೆರೆಯಲ್ಲಿ ಶುಕ್ರವಾರ ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> ನಾಯಕನಹಟ್ಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.<br /> <br /> ಅವರಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ನಾಯಕನಹಟ್ಟಿ ಜನತೆಗೆ ಶಾಶ್ವತವಾಗಿ ನೀರಿನ ಬವಣೆ ನೀಗಿಸುವ ಸಲುವಾಗಿ ಹಿರೇಕೆರೆಯಲ್ಲಿ ಆರು ಬೋರ್ವೆಲ್ ಕೊರೆಸಿದ್ದು, ಅಲ್ಲಿಂದ ನಾಯಕನಹಟ್ಟಿಗೆ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.<br /> <br /> <strong>ಓಂ ವೃಕ್ಷ ವೃದ್ಧಿ ಆಶ್ರಮಕ್ಕೆ ಅನುದಾನ: </strong> ಸಮೀಪದ ಮಲ್ಲೋರ ಹಟ್ಟಿ ಯಲ್ಲಿರುವ ಓಂ ವೃಕ್ಷ ವೃದ್ಧಿ ಆಶ್ರಮದಲ್ಲಿ ಸಮುದಾಯ ಭವನ ನಿರ್ಮಿಸಲು ₨ 25 ಲಕ್ಷ ಅನುದಾನ ನೀಡಲಾಗುವುದು. ಹಾಗೆಯೇ ತಳುಕಿನಿಂದ ನಾಯಕನಹಟ್ಟಿ ವರೆಗಿನ ರಸ್ತೆಯನ್ನು ದ್ವಿ ಪಥವನ್ನಾಗಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಆರ್ಡಿಪಿಯಿಂದ 7 ಬೋರ್ವೆಲ್ ಕೊರೆಯಿಸ ಲಾಗಿದ್ದು, ಅಲ್ಲಿಂದ ಮೊಳಕಾಲ್ಮುರು ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುವುದು ಎಂದರು.<br /> <br /> ಗ್ರಾಮ ಪಂಚಾಯ್ತಿ ಅಧ್ಯಕ್ಷೆ ತಿಪ್ಪಮ್ಮ, ಸದಸ್ಯರಾದ ಪಾಲಯ್ಯ, ತಿಪ್ಪೇಸ್ವಾಮಿ, ಫಾಲಾಕ್ಷ ಮುಖಂಡ ರಾದ ಗುರುಲಿಂಗಯ್ಯ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಸೈಯದ್ ಅನ್ವರ್, ಮಹಾಂತೇಶ್, ಕೌಸರ್ ಭಾಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>