<p>ಚಿತ್ರದುರ್ಗ: ಜನ ಮತ್ತು ಜಾನುವಾರು ರಕ್ಷಣೆಗೆ ಜಿಲ್ಲೆಯ ಎಲ್ಲ ಪಕ್ಷಗಳ ಶಾಸಕರನ್ನು ಒಳಗೊಂಡ ಬರ ಪರಿಹಾರ ನಿರ್ವಹಣಾ ಸಮಿತಿ ರಚಿಸಿ, ಅಧಿಕಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸರ್ಕಾರವನ್ನು ಒತ್ತಾಯಿಸಿದೆ. <br /> <br /> ಬರಗಾಲಕ್ಕೆ ತುತ್ತಾಗಿರುವ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ನಿರ್ವಹಣೆಯಲ್ಲಿ ಸಾಕಷ್ಟು ಲೋಪವಾಗುತ್ತಿದ್ದೆ. ರೈತರು ಜಾನುವಾರುಗಳನ್ನು ಸಾಕಲಾಗದೇ ಸಿಕ್ಕಷ್ಟು ಬೆಲೆಗೆ ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಅಗತ್ಯವಿರುವ ಕಡೆ ಗೋಶಾಲೆ ಆರಂಭಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದೆ. <br /> <br /> ಜಿಲ್ಲೆಯ ಉಸ್ತುವಾರಿ ಸಚಿವರು ಜಿಲ್ಲೆಯ ಬರದ ಬಗ್ಗೆ ಕಾಳಜಿ ವಹಿಸದೇ ರಾಜಕೀಯ ದೊಂಬರಾಟದಲ್ಲಿ ತೊಡಗಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲು ಬರಪರಿಹಾರ ನಿರ್ವಹಣಾ ಸಮಿತಿ ರಚಿಸಿ ಅಧಿಕಾರ ನೀಡಬೇಕು ಎಂದು ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬಾಗೇನಾಳ್ ಕೊಟ್ರಬಸಪ್ಪ, ಆರ್.ಬಿ. ನಿಜಲಿಂಗಪ್ಪ ಆಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಜನ ಮತ್ತು ಜಾನುವಾರು ರಕ್ಷಣೆಗೆ ಜಿಲ್ಲೆಯ ಎಲ್ಲ ಪಕ್ಷಗಳ ಶಾಸಕರನ್ನು ಒಳಗೊಂಡ ಬರ ಪರಿಹಾರ ನಿರ್ವಹಣಾ ಸಮಿತಿ ರಚಿಸಿ, ಅಧಿಕಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸರ್ಕಾರವನ್ನು ಒತ್ತಾಯಿಸಿದೆ. <br /> <br /> ಬರಗಾಲಕ್ಕೆ ತುತ್ತಾಗಿರುವ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ನಿರ್ವಹಣೆಯಲ್ಲಿ ಸಾಕಷ್ಟು ಲೋಪವಾಗುತ್ತಿದ್ದೆ. ರೈತರು ಜಾನುವಾರುಗಳನ್ನು ಸಾಕಲಾಗದೇ ಸಿಕ್ಕಷ್ಟು ಬೆಲೆಗೆ ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಅಗತ್ಯವಿರುವ ಕಡೆ ಗೋಶಾಲೆ ಆರಂಭಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದೆ. <br /> <br /> ಜಿಲ್ಲೆಯ ಉಸ್ತುವಾರಿ ಸಚಿವರು ಜಿಲ್ಲೆಯ ಬರದ ಬಗ್ಗೆ ಕಾಳಜಿ ವಹಿಸದೇ ರಾಜಕೀಯ ದೊಂಬರಾಟದಲ್ಲಿ ತೊಡಗಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲು ಬರಪರಿಹಾರ ನಿರ್ವಹಣಾ ಸಮಿತಿ ರಚಿಸಿ ಅಧಿಕಾರ ನೀಡಬೇಕು ಎಂದು ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬಾಗೇನಾಳ್ ಕೊಟ್ರಬಸಪ್ಪ, ಆರ್.ಬಿ. ನಿಜಲಿಂಗಪ್ಪ ಆಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>