‘ಶುದ್ಧ ಕುಡಿಯುವ ನೀರು, ಶುದ್ಧ ಗಾಳಿ, ಶುದ್ಧ ಪರಿಸರ ಮಕ್ಕಳ ಹಕ್ಕಲ್ಲವೇ ಎಂದು ಪ್ರಶ್ನಿಸಿದ’ ಅವರು, ‘ಬಡ, ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳು ಎಲ್ಲಾ ಕಷ್ಟಗಳನ್ನು ಸಹಿಸಿಕೊಳ್ಳುತ್ತಾರೆ ಎಂಬ ಕಾರಣಕ್ಕಾಗಿ ಅವರನ್ನು ನಾವು ಕಲುಷಿತ ವಾತಾವರಣದಲ್ಲಿ ಬೆಳೆಸಬಾರದು. ಅವರ ಹಕ್ಕುಗಳನ್ನು ರಕ್ಷಿಸಲು ನಾವೆಲ್ಲರೂ ಮುಂದಾಗಬೇಕು’ ಎಂದು ಸಲಹೆ ನೀಡಿದರು.