<p><strong>ಚಿತ್ರದುರ್ಗ: </strong>ಬೇಸಿಗೆಯ ದಿನಗಳಲ್ಲಿ ಸಹಜವಾಗಿ ಉಂಟಾಗುವ ವಿದ್ಯುತ್ ಕೊರತೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.<br /> ನಗರಕ್ಕೆ ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುವುದರಿಂದ ಅಗತ್ಯ ವಿದ್ಯುತ್ ಖರೀದಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಹೊರರಾಜ್ಯಗಳಿಂದ ವಿದ್ಯುತ್ ಖರೀದಿಸಲು ಸೂಚಿಸಲಾಗಿದ್ದು, ಯಾವುದೇ ತೊಂದರೆಯಾಗದಂತೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.<br /> ಮೂರು ವಿಧಾನಸಭಾ ಕ್ಷೇತ್ರ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಆತ್ಮವಿಶ್ವಾಸದಿಂದ ಹೇಳಿದ ಮುಖ್ಯಮಂತ್ರಿ, ರಾಜ್ಯದ ಜನತೆ ನಮ್ಮ ಪರವಾಗಿರುವಾಗ ನಮಗೆ ಸೋಲು ಇಲ್ಲ ಎಂದರು.<br /> <br /> ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶ್ವ ಕನ್ನಡ ಸಮ್ಮೇಳನ ಯಶಸ್ವಿಯಾಗಿದೆ. 30 ವರ್ಷಗಳ ನಂತರ ನಡೆಯುತ್ತಿರುವ ವಿಶ್ವ ಕನ್ನಡ ಸಮ್ಮೇಳನ ಇತಿಹಾಸದಲ್ಲಿಯೇ ನಡೆಯದಂತಹ ಅಭೂತಪೂರ್ವ ಕಾರ್ಯಕ್ರಮವಾಗಿದೆ. ಮೂರು ದಿನಗಳಿಂದ ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಿ ಸಮ್ಮೇಳನದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಬೇಸಿಗೆಯ ದಿನಗಳಲ್ಲಿ ಸಹಜವಾಗಿ ಉಂಟಾಗುವ ವಿದ್ಯುತ್ ಕೊರತೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.<br /> ನಗರಕ್ಕೆ ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುವುದರಿಂದ ಅಗತ್ಯ ವಿದ್ಯುತ್ ಖರೀದಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಹೊರರಾಜ್ಯಗಳಿಂದ ವಿದ್ಯುತ್ ಖರೀದಿಸಲು ಸೂಚಿಸಲಾಗಿದ್ದು, ಯಾವುದೇ ತೊಂದರೆಯಾಗದಂತೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.<br /> ಮೂರು ವಿಧಾನಸಭಾ ಕ್ಷೇತ್ರ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಆತ್ಮವಿಶ್ವಾಸದಿಂದ ಹೇಳಿದ ಮುಖ್ಯಮಂತ್ರಿ, ರಾಜ್ಯದ ಜನತೆ ನಮ್ಮ ಪರವಾಗಿರುವಾಗ ನಮಗೆ ಸೋಲು ಇಲ್ಲ ಎಂದರು.<br /> <br /> ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶ್ವ ಕನ್ನಡ ಸಮ್ಮೇಳನ ಯಶಸ್ವಿಯಾಗಿದೆ. 30 ವರ್ಷಗಳ ನಂತರ ನಡೆಯುತ್ತಿರುವ ವಿಶ್ವ ಕನ್ನಡ ಸಮ್ಮೇಳನ ಇತಿಹಾಸದಲ್ಲಿಯೇ ನಡೆಯದಂತಹ ಅಭೂತಪೂರ್ವ ಕಾರ್ಯಕ್ರಮವಾಗಿದೆ. ಮೂರು ದಿನಗಳಿಂದ ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಿ ಸಮ್ಮೇಳನದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>