<p>ಹಿರಿಯೂರು: ನಗರದ ಶ್ರೀ ಹನುಮತ್ ಶಕ್ತಿ ಜಾಗರಣಾ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವದ ಅಂಗವಾಗಿ ಸೋಮವಾರ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.<br /> ಉತ್ಸವದಲ್ಲಿ ಪಾಲ್ಗೊಂಡಿದ್ದ ಹಿಂದೂ ಸಹೋದರರಿಗೆ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ, ಚಪ್ಪರ ನಿರ್ಮಿಸಿ ತಂಪು ಪಾನೀಯ ವಿತರಣೆ ಮಾಡಿ ಶುಭ ಹಾರೈಸುವ ಮೂಲಕ ಹಿರಿಯೂರಿನ ಮುಸಲ್ಮಾನರು ಸಹೋದರತ್ವವನ್ನು ಎತ್ತಿಹಿಡಿದರು. <br /> <br /> ಮುಖಂಡರಾದ ಜಬೀವುಲ್ಲಾ, ಫಕೃದ್ದೀನ್, ಪಿ.ಎಸ್. ಸಾದತ್ವುಲ್ಲಾ ಮೊದಲಾದವರು ಉಪಸ್ಥಿತರಿದ್ದರು.ಉತ್ಸವದಲ್ಲಿ ಶ್ರೀರಾಮನ ವೇಷ ಧರಿಸಿದ್ದ ಯುವಕ ಎ. ನಾಗೇಶ್ ಎಲ್ಲರ ಗಮನ ಸೆಳೆದರು. ಗೋಪಾಲಪುರ ಬಡಾವಣೆಯಲ್ಲಿ ಹತ್ತಾರು ಮಹಿಳೆಯರು ರಾಮನ ಪಾತ್ರಧಾರಿಗೆ ಹೂಮಾಲೆ ಹಾಕಿ, ನಮಸ್ಕರಿಸಿದ್ದೂ ನಡೆಯಿತು.<br /> <br /> ಸಿದ್ಧನಾಯಕ ವೃತ್ತದ ಆಂಜನೇಯ ಸ್ವಾಮಿ ದೇಗುಲದಿಂದ ಹೊರಟ ಮೆರವಣಿಗೆ, ಗೋಪಾಲಪುರ ಬಡಾವಣೆ, ಬಸ್ನಿಲ್ದಾಣದ ಪಕ್ಕದ ರಸ್ತೆ, ಪ್ರಧಾನರಸ್ತೆ, ಚರ್ಚ್ರಸ್ತೆ, ಹುಳಿಯಾರು ರಸ್ತೆ ಮೂಲಕ ನೆಹರು ಮೈದಾನಕ್ಕೆ ಆಗಮಿಸಿತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ನಗರದ ಶ್ರೀ ಹನುಮತ್ ಶಕ್ತಿ ಜಾಗರಣಾ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವದ ಅಂಗವಾಗಿ ಸೋಮವಾರ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.<br /> ಉತ್ಸವದಲ್ಲಿ ಪಾಲ್ಗೊಂಡಿದ್ದ ಹಿಂದೂ ಸಹೋದರರಿಗೆ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ, ಚಪ್ಪರ ನಿರ್ಮಿಸಿ ತಂಪು ಪಾನೀಯ ವಿತರಣೆ ಮಾಡಿ ಶುಭ ಹಾರೈಸುವ ಮೂಲಕ ಹಿರಿಯೂರಿನ ಮುಸಲ್ಮಾನರು ಸಹೋದರತ್ವವನ್ನು ಎತ್ತಿಹಿಡಿದರು. <br /> <br /> ಮುಖಂಡರಾದ ಜಬೀವುಲ್ಲಾ, ಫಕೃದ್ದೀನ್, ಪಿ.ಎಸ್. ಸಾದತ್ವುಲ್ಲಾ ಮೊದಲಾದವರು ಉಪಸ್ಥಿತರಿದ್ದರು.ಉತ್ಸವದಲ್ಲಿ ಶ್ರೀರಾಮನ ವೇಷ ಧರಿಸಿದ್ದ ಯುವಕ ಎ. ನಾಗೇಶ್ ಎಲ್ಲರ ಗಮನ ಸೆಳೆದರು. ಗೋಪಾಲಪುರ ಬಡಾವಣೆಯಲ್ಲಿ ಹತ್ತಾರು ಮಹಿಳೆಯರು ರಾಮನ ಪಾತ್ರಧಾರಿಗೆ ಹೂಮಾಲೆ ಹಾಕಿ, ನಮಸ್ಕರಿಸಿದ್ದೂ ನಡೆಯಿತು.<br /> <br /> ಸಿದ್ಧನಾಯಕ ವೃತ್ತದ ಆಂಜನೇಯ ಸ್ವಾಮಿ ದೇಗುಲದಿಂದ ಹೊರಟ ಮೆರವಣಿಗೆ, ಗೋಪಾಲಪುರ ಬಡಾವಣೆ, ಬಸ್ನಿಲ್ದಾಣದ ಪಕ್ಕದ ರಸ್ತೆ, ಪ್ರಧಾನರಸ್ತೆ, ಚರ್ಚ್ರಸ್ತೆ, ಹುಳಿಯಾರು ರಸ್ತೆ ಮೂಲಕ ನೆಹರು ಮೈದಾನಕ್ಕೆ ಆಗಮಿಸಿತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>