<p><strong>ಚಿತ್ರದುರ್ಗ: </strong>ಯಾವುದೇ ದೇಶ ಆರ್ಥಿಕವಾಗಿ ವಿಕಾಸಗೊಳ್ಳಲು ಹಾಗೂ ಸಾಮಾಜಿಕ ಪರಿವರ್ತನೆಯಾಗಬೇಕಾದಲ್ಲಿ ಸಂಖ್ಯಾಶಾಸ್ತ್ರದ ಕೊಡುಗೆ ಅಪಾರವಾಗಿದೆ ಎಂದು ಸರ್ಕಾರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್. ಲಿಂಗಪ್ಪ ತಿಳಿಸಿದರು.<br /> <br /> ಜಿಲ್ಲಾ ಸಾಂಖ್ಯಿಕ ಇಲಾಖೆ ವತಿಯಿಂದ ಗುರುವಾರ ನಗರದ ಎಸ್ಜೆಎಂ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಯಾವುದೇ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿಅಂಶಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಬಡತನ, ದಾರಿದ್ರ್ಯ, ಬಂಡವಾಳದ ವ್ಯತ್ಯಾಸ ಇವೆಲ್ಲವುಗಳ ಹಿನ್ನೆಲೆಯಲ್ಲಿ ಅಂಕಿ-ಸಂಖ್ಯೆಗಳ ಮಾಹಿತಿ ಬಹಳ ಮುಖ್ಯವಾಗಿವೆ ಎಂದು ತಿಳಿಸಿದರು. <br /> <br /> ದೇಶದ ಸಮಗ್ರ ಪ್ರಗತಿಯಲ್ಲಿ ಅಂಕಿ-ಅಂಶಗಳು ಬೆಳಕನ್ನು ನೀಡುತ್ತಿವೆ ಎಂದು ತಿಳಿಸಿದ ಅಮರ್ಥ್ಯಸೇನ್ ಆರ್ಥಿಕ ಚಿಂತಕರಾಗಿದ್ದು, ಯಾವುದೇ ಆರ್ಥಿಕ ಬೆಳವಣಿಗೆಯಲ್ಲಿ ಅಂಕಿ- ಸಂಖ್ಯೆಗಳೇ ಆಧಾರವೆಂದು ತೋರಿಸಿದರು. ಸಾಂಖ್ಯಿಕ ಇಲಾಖೆ ನಮ್ಮೆಲ್ಲ ಕ್ಷೇತ್ರದ ಬೆಳವಣಿಗೆಗೆ ಮಾಹಿತಿ ನೀಡುವಂತಹ ವಿಶಿಷ್ಟವಾದ ಇಲಾಖೆ ಎಂದು ನುಡಿದರು. <br /> <br /> ಪ್ರೊ.ಕೆ. ರಾಮರಾವ್ ಮಾತನಾಡಿ, ಸಮಾಜದ ಅಭಿವೃದ್ದಿಗೆ ಬೇಕಾಗುವ ಯೋಜನೆಗಳನ್ನು ರೂಪಿಸಬೇಕಾದರೆ ಅದರ ಹಿಂದೆ ಸಂಖ್ಯಾಶಾಸ್ತ್ರದ ಕೊಡುಗೆ ಮುಖ್ಯವಾಗುತ್ತದೆ ಎಂದು ತಿಳಿಸಿದರು. <br /> <br /> ಎಸ್ಜೆಎಂ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ರಂಗಸ್ವಾಮಿ, ಸಹಾಯಕ ಸಾಂಖ್ಯಿಕ ಅಧಿಕಾರಿ ರಾಜಣ್ಣ, ಜಿಲ್ಲಾ ವಾರ್ತಾಧಿಕಾರಿ ಎಸ್. ಮಹೇಶ್ವರಯ್ಯ, ಪ್ರೊ.ಗಂಗಾಧರಭಟ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಚಂದ್ರಪ್ಪ ಉಪಸ್ಥಿತರಿದ್ದರು. ಆಶಾ ವಂದಿಸಿದರು.<br /> <br /> ಸಂತಾಪ: ಮಾಜಿ ಸಚಿವ ಕೆ.ಎಚ್. ರಂಗನಾಥ್ ಅವರ ನಿಧನಕ್ಕೆ ಚಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಯಾವುದೇ ದೇಶ ಆರ್ಥಿಕವಾಗಿ ವಿಕಾಸಗೊಳ್ಳಲು ಹಾಗೂ ಸಾಮಾಜಿಕ ಪರಿವರ್ತನೆಯಾಗಬೇಕಾದಲ್ಲಿ ಸಂಖ್ಯಾಶಾಸ್ತ್ರದ ಕೊಡುಗೆ ಅಪಾರವಾಗಿದೆ ಎಂದು ಸರ್ಕಾರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್. ಲಿಂಗಪ್ಪ ತಿಳಿಸಿದರು.<br /> <br /> ಜಿಲ್ಲಾ ಸಾಂಖ್ಯಿಕ ಇಲಾಖೆ ವತಿಯಿಂದ ಗುರುವಾರ ನಗರದ ಎಸ್ಜೆಎಂ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಯಾವುದೇ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿಅಂಶಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಬಡತನ, ದಾರಿದ್ರ್ಯ, ಬಂಡವಾಳದ ವ್ಯತ್ಯಾಸ ಇವೆಲ್ಲವುಗಳ ಹಿನ್ನೆಲೆಯಲ್ಲಿ ಅಂಕಿ-ಸಂಖ್ಯೆಗಳ ಮಾಹಿತಿ ಬಹಳ ಮುಖ್ಯವಾಗಿವೆ ಎಂದು ತಿಳಿಸಿದರು. <br /> <br /> ದೇಶದ ಸಮಗ್ರ ಪ್ರಗತಿಯಲ್ಲಿ ಅಂಕಿ-ಅಂಶಗಳು ಬೆಳಕನ್ನು ನೀಡುತ್ತಿವೆ ಎಂದು ತಿಳಿಸಿದ ಅಮರ್ಥ್ಯಸೇನ್ ಆರ್ಥಿಕ ಚಿಂತಕರಾಗಿದ್ದು, ಯಾವುದೇ ಆರ್ಥಿಕ ಬೆಳವಣಿಗೆಯಲ್ಲಿ ಅಂಕಿ- ಸಂಖ್ಯೆಗಳೇ ಆಧಾರವೆಂದು ತೋರಿಸಿದರು. ಸಾಂಖ್ಯಿಕ ಇಲಾಖೆ ನಮ್ಮೆಲ್ಲ ಕ್ಷೇತ್ರದ ಬೆಳವಣಿಗೆಗೆ ಮಾಹಿತಿ ನೀಡುವಂತಹ ವಿಶಿಷ್ಟವಾದ ಇಲಾಖೆ ಎಂದು ನುಡಿದರು. <br /> <br /> ಪ್ರೊ.ಕೆ. ರಾಮರಾವ್ ಮಾತನಾಡಿ, ಸಮಾಜದ ಅಭಿವೃದ್ದಿಗೆ ಬೇಕಾಗುವ ಯೋಜನೆಗಳನ್ನು ರೂಪಿಸಬೇಕಾದರೆ ಅದರ ಹಿಂದೆ ಸಂಖ್ಯಾಶಾಸ್ತ್ರದ ಕೊಡುಗೆ ಮುಖ್ಯವಾಗುತ್ತದೆ ಎಂದು ತಿಳಿಸಿದರು. <br /> <br /> ಎಸ್ಜೆಎಂ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ರಂಗಸ್ವಾಮಿ, ಸಹಾಯಕ ಸಾಂಖ್ಯಿಕ ಅಧಿಕಾರಿ ರಾಜಣ್ಣ, ಜಿಲ್ಲಾ ವಾರ್ತಾಧಿಕಾರಿ ಎಸ್. ಮಹೇಶ್ವರಯ್ಯ, ಪ್ರೊ.ಗಂಗಾಧರಭಟ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಚಂದ್ರಪ್ಪ ಉಪಸ್ಥಿತರಿದ್ದರು. ಆಶಾ ವಂದಿಸಿದರು.<br /> <br /> ಸಂತಾಪ: ಮಾಜಿ ಸಚಿವ ಕೆ.ಎಚ್. ರಂಗನಾಥ್ ಅವರ ನಿಧನಕ್ಕೆ ಚಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>