‘ಜೆಡಿಎಸ್ ವರಿಷ್ಠ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ರಾಷ್ಟ್ರನಾಯಕ ನಿಜಲಿಂಗಪ್ಪ ಅವರ ನಂತರದ ಪೀಳಿಗೆಯಲ್ಲಿ ದೇವೇಗೌಡರು, ಜೆ.ಎಚ್.ಪಟೇಲರು, ಬೊಮ್ಮಾಯಿ ಒಂದು ಪೀಳಿಗೆಯ ನಾಯಕರು ಎನಿಸಿಕೊಂಡವರು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ದೀಪಾವಳಿ ಹಬ್ಬದ ದಿನ ಗೌಡರಿಗೆ ಶುಭಾಶಯ ಕೋರಲು ನಾನು ಹೋಗುತ್ತೇನೆ. ಇದೇ ಸಂದರ್ಭದಲ್ಲಿ ಈಚೆಗೆ ನೀವು ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗಬೇಕು ಎಂದು ಸಲಹೆ ಕೊಟ್ಟಿದ್ದಾರೆ. ಅದನ್ನು ಸ್ವೀಕರಿಸಿದ್ದೇನೆ’ ಎಂದು ಹೇಳಿದರು.