ಇದಕ್ಕೂ ಮುನ್ನ ಬಿಜೆಪಿಯವರು ಪ್ರಚಾರಕ್ಕೆ ಅನುಮತಿ ನೀಡಿದ ಅವಧಿ ಮುಗಿದ ಕೂಡಲೇ ಅವಧಿ ವಿಸ್ತರಣೆಗಾಗಿ ಮನವಿ ಮಾಡಿದರು. ಆದರೆ, ಅದೇ ಅವಧಿಯಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಪ್ರಚಾರಕ್ಕೆ ಅನುಮತಿ ನೀಡಲಾಗಿತ್ತು. ಹೀಗಾಗಿ ಪಟ್ಟಣದಲ್ಲಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಬಹುದು ಎಂಬ ಎಚ್ಚರಿಕೆಯಿಂದ ಅವಧಿಯನ್ನು ವಿಸ್ತರಿ ಸಲು ಅಧಿಕಾರಿಗಳು ಸಮ್ಮತಿಸಲಿಲ್ಲ.