<p><strong>ಚಿತ್ರದುರ್ಗ:</strong> ಹಕ್ಕುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಗ್ರಾಹಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಪ್ರತಿಪಾದಿಸಿದರು.<br /> <br /> ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಮತ್ತು ಕಾನೂನು ಮಾಪನಾಶಾಸ್ತ್ರ ಇಲಾಖೆಯ ಆಶ್ರಯದಲ್ಲಿ ಗುರುವಾರ ನಗರದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವರ್ಷದಲ್ಲಿ ಎರಡು ಬಾರಿ ಗ್ರಾಹಕರ ದಿನ ಆಚರಿಸುವ ಮೂಲಕ ಗ್ರಾಹಕರ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಹಕರಲ್ಲಿ ಅರಿವು ಮೂಡುತ್ತಿರುವುದರಿಂದ ಗ್ರಾಹಕರ ವೇದಿಕೆಗೆ ದೂರುಗಳ ಸಂಖ್ಯೆ ಹೆಚ್ಚುತ್ತಿದೆ ಎಂದರು.<br /> <br /> ಗ್ರಾಹಕರು ಉತ್ತಮ ವಸ್ತುಗಳನ್ನು ಪಡೆಯಬೇಕು. ಯಾವುದೇ ರೀತಿಯ ತೊಂದರೆಗಳಾದರೆ ಪರಿಹಾರ ಪಡೆಯಲು ಅಗತ್ಯವಾದ ದಾಖಲೆಗಳ ಸಮೇತ ಗ್ರಾಹಕರ ವೇದಿಕೆಗೆ ದೂರು ನೀಡುವ ಮೂಲಕ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.<br /> <br /> ಪಡಿತರ ಚೀಟಿ ಪಡೆಯಲು ಸರ್ಕಾರ ಆನ್ಲೈನ್ ಪದ್ಧತಿ ಜಾರಿಗೊಳಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ ಪಡಿತರ ಚೀಟಿ ಪಡೆಯಬಹುದು. ಇತ್ತೀಚೆಗೆ ಜಾರಿಗೆ ಬಂದಿರುವ ಕರ್ನಾಟಕ ನಾಗರಿಕ ಸೇವಾ ಖಾತರಿ ಕಾಯ್ದೆ ಅಡಿಯಲ್ಲಿ ನಾಗರಿಕರು ತಮ್ಮ ಸಮಸ್ಯೆಯನ್ನು ಪರಿಹಾರ ಪಡೆದುಕೊಳ್ಳುತ್ತಿದ್ದಾರೆ. ಈ ಕಾಯ್ದೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಮಾತ್ರ ಸದ್ಯ ಜಾರಿಯಾಗಿದ್ದು, ಏಪ್ರಿಲ್ ಎರಡರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಹೇಳಿದರು. <br /> <br /> ಗ್ರಾಹಕರ ವೇದಿಕೆ ಅಧ್ಯಕ್ಷ ವಿ.ಎಚ್. ರಾಮಚಂದ್ರಪ್ಪ ಮಾತನಾಡಿ, ಸರ್ಕಾರ ಗ್ರಾಹಕರ ಹಕ್ಕುಗಳ ಬಗ್ಗೆ ರೂಪಿಸಿರುವ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು. ಇತ್ತೀಚೆಗೆ ಶಾಲಾ ಮತ್ತು ಕಾಲೇಜುಗಳಲ್ಲಿ ಗ್ರಾಹಕರ ಕ್ಲಬ್ಗಳನ್ನು ಸ್ಥಾಪಿಸಿದ್ದರಿಂದ ಗ್ರಾಹಕರ ವೇದಿಕೆಗೆ ದೂರುಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.<br /> ಉಪ ವಿಭಾಗಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆಯ ಸದಸ್ಯರಾದ ಎಚ್. ರಾಮಸ್ವಾಮಿ ಮತ್ತು ಸೌಭಾಗ್ಯಲಕ್ಷ್ಮೀ ಉಪಸ್ಥಿತರಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ ಸ್ವಾಗತಿಸಿದರು. <br /> <br /> ಸಾವಿತ್ರಮ್ಮ ಪ್ರಾರ್ಥಿಸಿದರು. ಕಾನೂನು ಮಾಪನಾಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಕುಮಾರ್ ವಂದಿಸಿದರು.<br /> </p>.<p><strong> ಹಾಲು ಮಾರಾಟಗಾರರಿಗೆ ಎಚ್ಚರಿಕೆ<br /> </strong>ಹೆಚ್ಚಿನ ದರಕ್ಕೆ ಹಾಲು ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ವೀರೇಂದ್ರ ಕುಮಾರ್ ತಿಳಿಸಿದರು.<br /> <br /> ಹಾಲಿನ ದರವನ್ನು ಮುದ್ರಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತಿಲ್ಲ. ಹೆಚ್ಚಿನ ದರಕ್ಕೆ ಹಾಲು ಮಾರಾಟ ಮಾಡಿದರೆ ಅಂಗಡಿಯ ಮೇಲೆ ದಂಡ ಹಾಕಲಾಗುವುದು ಮತ್ತು ಕೆಎಂಎಫ್ಗೆ ದೂರು ನೀಡಿ ಪರವಾನಿಗೆ ರದ್ದು ಮಾಡಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.<br /> <br /> ಈ ಮೊದಲು ವರ್ತಕರು ವಸ್ತುಗಳನ್ನು ತೂಕದಲ್ಲಿ ನೀಡುತ್ತಿದ್ದರು. ಆದರೆ, ಈಗ ಬಹುತೇಕ ವಸ್ತುಗಳು ಪ್ಯಾಕೆಟ್ನಲ್ಲಿ ಮಾರಾಟವಾಗುತ್ತಿವೆ. ಈ ಪ್ಯಾಕೆಟ್ಗಳಲ್ಲಿ ವ್ಯತ್ಯಾಸ ಕಂಡುಬಂದರೆ ಗ್ರಾಹಕರು ಇಲಾಖೆಗೆ ದೂರು ನೀಡಬಹುದು.<br /> <br /> ಗ್ರಾಹಕರು ದೂರುಗಳನ್ನು ಲಿಖಿತವಾಗಿ ಅಥವಾ ದೂರವಾಣಿಯ ಮೂಲಕ ಸಲ್ಲಿಸಬಹುದಾಗಿದೆ. ಹೆಸರನ್ನು ಸಹ ಗೌಪ್ಯವಾಗಿ ಇಡಲಾಗುವುದು. ಗ್ರಾಹಕರು ಕಾಯ್ದೆಯ ಪ್ರಯೋಜನ ಪಡೆಯುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಹಕ್ಕುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಗ್ರಾಹಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಪ್ರತಿಪಾದಿಸಿದರು.<br /> <br /> ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಮತ್ತು ಕಾನೂನು ಮಾಪನಾಶಾಸ್ತ್ರ ಇಲಾಖೆಯ ಆಶ್ರಯದಲ್ಲಿ ಗುರುವಾರ ನಗರದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವರ್ಷದಲ್ಲಿ ಎರಡು ಬಾರಿ ಗ್ರಾಹಕರ ದಿನ ಆಚರಿಸುವ ಮೂಲಕ ಗ್ರಾಹಕರ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಹಕರಲ್ಲಿ ಅರಿವು ಮೂಡುತ್ತಿರುವುದರಿಂದ ಗ್ರಾಹಕರ ವೇದಿಕೆಗೆ ದೂರುಗಳ ಸಂಖ್ಯೆ ಹೆಚ್ಚುತ್ತಿದೆ ಎಂದರು.<br /> <br /> ಗ್ರಾಹಕರು ಉತ್ತಮ ವಸ್ತುಗಳನ್ನು ಪಡೆಯಬೇಕು. ಯಾವುದೇ ರೀತಿಯ ತೊಂದರೆಗಳಾದರೆ ಪರಿಹಾರ ಪಡೆಯಲು ಅಗತ್ಯವಾದ ದಾಖಲೆಗಳ ಸಮೇತ ಗ್ರಾಹಕರ ವೇದಿಕೆಗೆ ದೂರು ನೀಡುವ ಮೂಲಕ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.<br /> <br /> ಪಡಿತರ ಚೀಟಿ ಪಡೆಯಲು ಸರ್ಕಾರ ಆನ್ಲೈನ್ ಪದ್ಧತಿ ಜಾರಿಗೊಳಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ ಪಡಿತರ ಚೀಟಿ ಪಡೆಯಬಹುದು. ಇತ್ತೀಚೆಗೆ ಜಾರಿಗೆ ಬಂದಿರುವ ಕರ್ನಾಟಕ ನಾಗರಿಕ ಸೇವಾ ಖಾತರಿ ಕಾಯ್ದೆ ಅಡಿಯಲ್ಲಿ ನಾಗರಿಕರು ತಮ್ಮ ಸಮಸ್ಯೆಯನ್ನು ಪರಿಹಾರ ಪಡೆದುಕೊಳ್ಳುತ್ತಿದ್ದಾರೆ. ಈ ಕಾಯ್ದೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಮಾತ್ರ ಸದ್ಯ ಜಾರಿಯಾಗಿದ್ದು, ಏಪ್ರಿಲ್ ಎರಡರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಹೇಳಿದರು. <br /> <br /> ಗ್ರಾಹಕರ ವೇದಿಕೆ ಅಧ್ಯಕ್ಷ ವಿ.ಎಚ್. ರಾಮಚಂದ್ರಪ್ಪ ಮಾತನಾಡಿ, ಸರ್ಕಾರ ಗ್ರಾಹಕರ ಹಕ್ಕುಗಳ ಬಗ್ಗೆ ರೂಪಿಸಿರುವ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು. ಇತ್ತೀಚೆಗೆ ಶಾಲಾ ಮತ್ತು ಕಾಲೇಜುಗಳಲ್ಲಿ ಗ್ರಾಹಕರ ಕ್ಲಬ್ಗಳನ್ನು ಸ್ಥಾಪಿಸಿದ್ದರಿಂದ ಗ್ರಾಹಕರ ವೇದಿಕೆಗೆ ದೂರುಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.<br /> ಉಪ ವಿಭಾಗಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆಯ ಸದಸ್ಯರಾದ ಎಚ್. ರಾಮಸ್ವಾಮಿ ಮತ್ತು ಸೌಭಾಗ್ಯಲಕ್ಷ್ಮೀ ಉಪಸ್ಥಿತರಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ ಸ್ವಾಗತಿಸಿದರು. <br /> <br /> ಸಾವಿತ್ರಮ್ಮ ಪ್ರಾರ್ಥಿಸಿದರು. ಕಾನೂನು ಮಾಪನಾಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಕುಮಾರ್ ವಂದಿಸಿದರು.<br /> </p>.<p><strong> ಹಾಲು ಮಾರಾಟಗಾರರಿಗೆ ಎಚ್ಚರಿಕೆ<br /> </strong>ಹೆಚ್ಚಿನ ದರಕ್ಕೆ ಹಾಲು ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ವೀರೇಂದ್ರ ಕುಮಾರ್ ತಿಳಿಸಿದರು.<br /> <br /> ಹಾಲಿನ ದರವನ್ನು ಮುದ್ರಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತಿಲ್ಲ. ಹೆಚ್ಚಿನ ದರಕ್ಕೆ ಹಾಲು ಮಾರಾಟ ಮಾಡಿದರೆ ಅಂಗಡಿಯ ಮೇಲೆ ದಂಡ ಹಾಕಲಾಗುವುದು ಮತ್ತು ಕೆಎಂಎಫ್ಗೆ ದೂರು ನೀಡಿ ಪರವಾನಿಗೆ ರದ್ದು ಮಾಡಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.<br /> <br /> ಈ ಮೊದಲು ವರ್ತಕರು ವಸ್ತುಗಳನ್ನು ತೂಕದಲ್ಲಿ ನೀಡುತ್ತಿದ್ದರು. ಆದರೆ, ಈಗ ಬಹುತೇಕ ವಸ್ತುಗಳು ಪ್ಯಾಕೆಟ್ನಲ್ಲಿ ಮಾರಾಟವಾಗುತ್ತಿವೆ. ಈ ಪ್ಯಾಕೆಟ್ಗಳಲ್ಲಿ ವ್ಯತ್ಯಾಸ ಕಂಡುಬಂದರೆ ಗ್ರಾಹಕರು ಇಲಾಖೆಗೆ ದೂರು ನೀಡಬಹುದು.<br /> <br /> ಗ್ರಾಹಕರು ದೂರುಗಳನ್ನು ಲಿಖಿತವಾಗಿ ಅಥವಾ ದೂರವಾಣಿಯ ಮೂಲಕ ಸಲ್ಲಿಸಬಹುದಾಗಿದೆ. ಹೆಸರನ್ನು ಸಹ ಗೌಪ್ಯವಾಗಿ ಇಡಲಾಗುವುದು. ಗ್ರಾಹಕರು ಕಾಯ್ದೆಯ ಪ್ರಯೋಜನ ಪಡೆಯುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>