<p><strong>ಹಿರಿಯೂರು: </strong>ನಗರದ ಹರಿಶ್ಚಂದ್ರಘಾಟ್ ಬಡಾವಣೆಯ ಬಡವರಿಗೆ ಸ್ಮಶಾನ ಮಂಜೂರು ಮಾಡಲಾಗಿದೆ. ಆದರೆ, ಮೂಲಸೌಲಭ್ಯ ಕಲ್ಪಿಸದೇ ಇರುವುದು ಬೇಸರದ ಸಂಗತಿ ಎಂದು ಶನಿವಾರ ಬಡಾವಣೆಯಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕುಂದು-ಕೊರತೆ ಸಭೆಯಲ್ಲಿ ನಾಗರಿಕರು ದೂರಿದರು.<br /> <br /> ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಪುರಸಭೆ ಹಾಗೂ ತಾಲ್ಲೂಕು ಕಚೇರಿ ಮುಂದೆ ನಿವಾಸಿಗಳು ಧರಣಿ ನಡೆಸಿದ್ದರಿಂದ ತಹಶೀಲ್ದಾರ್ ಪ್ರಯತ್ನ ನಡೆಸಿ, ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಸಿದ್ದಾರೆ. <br /> <br /> ಆದರೆ, ಬಡಾವಣೆಯಲ್ಲಿ ಸರಿಯಾದ ರಸ್ತೆಯಿಲ್ಲ, ಚರಂಡಿ ನಿರ್ಮಿಸಿಲ್ಲ. ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ಖಾಲಿ ನಿವೇಶನಗಳಲ್ಲಿ ಬಳ್ಳಾರಿಜಾಲಿ ಮುಳ್ಳು ಬೆಳೆದು ಹಂದಿಗಳ ವಾಸಸ್ಥಾನವಾಗಿದೆ. ಓವರ್ ಹೆಡ್ಟ್ಯಾಂಕ್ ನಿರ್ಮಿಸುತ್ತೇವೆ ಎಂದು ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ ಎಂದು ನಿವಾಸಿಗಳ ಪರವಾಗಿ ಮಾತನಾಡಿದ ಘಾಟ್ರವಿ ಆರೋಪಿಸಿದರು.<br /> <br /> ಬಡಾವಣೆಯಲ್ಲಿ 25-30 ವರ್ಷಗಳಿಂದ ವಾಸಿಸುತ್ತಿರುವವರಿಗೆ ನಿವೇಶನದ ಹಕ್ಕುಪತ್ರ ನೀಡಿಲ್ಲ. ತಕ್ಷಣ ಹಕ್ಕುಪತ್ರ ನೀಡಿ ಸರ್ಕಾರದ ಯಾವುದಾದರೂ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಬೇಕು. ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದು, ತಕ್ಷಣ ಕಾಮಗಾರಿ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.<br /> <br /> ಪುರಸಭೆಯ ಮುಖ್ಯಾಧಿಕಾರಿ ಚಂದ್ರಶೇಖರಪ್ಪ ಮಾತನಾಡಿ, ಸುಮಾರು 2 ಸಾವಿರ ನಿವೇಶನರಹಿತರಿಗೆ ನಿವೇಶನ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದಷ್ಟು ಬೇಗ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> <br /> ನಾಗರಿಕರು ಸಭೆಯಲ್ಲಿ ನಾಗರಿಕರು ವಿವಿಧ ಬೇಡಿಕೆಗಳನ್ನು ಮಂಡಿಸಿದರು. ಪುರಸಭಾ ಅಧ್ಯಕ್ಷೆ ಮಂಜುಳಾ ವೆಂಕಟೇಶ್ ಕುಂದು- ಕೊರತೆ ಸಭೆ ಉದ್ಘಾಟಿಸಿದರು. ಉಪಾಧ್ಯಕ್ಷೆ ಜ್ಯೋತಿಲಕ್ಷ್ಮೀ ಗೋಪಿಯಾದವ್, ತಹಶೀಲ್ದಾರ್ ಎನ್. ತಿಪ್ಪೇಸ್ವಾಮಿ, ಡಿವೈಎಸ್ಪಿ ಎನ್. ರುದ್ರಮುನಿ, ರಂಗಪ್ಪ, ಫಕೃದ್ದೀನ್ಸಾಬ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>ನಗರದ ಹರಿಶ್ಚಂದ್ರಘಾಟ್ ಬಡಾವಣೆಯ ಬಡವರಿಗೆ ಸ್ಮಶಾನ ಮಂಜೂರು ಮಾಡಲಾಗಿದೆ. ಆದರೆ, ಮೂಲಸೌಲಭ್ಯ ಕಲ್ಪಿಸದೇ ಇರುವುದು ಬೇಸರದ ಸಂಗತಿ ಎಂದು ಶನಿವಾರ ಬಡಾವಣೆಯಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕುಂದು-ಕೊರತೆ ಸಭೆಯಲ್ಲಿ ನಾಗರಿಕರು ದೂರಿದರು.<br /> <br /> ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಪುರಸಭೆ ಹಾಗೂ ತಾಲ್ಲೂಕು ಕಚೇರಿ ಮುಂದೆ ನಿವಾಸಿಗಳು ಧರಣಿ ನಡೆಸಿದ್ದರಿಂದ ತಹಶೀಲ್ದಾರ್ ಪ್ರಯತ್ನ ನಡೆಸಿ, ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಸಿದ್ದಾರೆ. <br /> <br /> ಆದರೆ, ಬಡಾವಣೆಯಲ್ಲಿ ಸರಿಯಾದ ರಸ್ತೆಯಿಲ್ಲ, ಚರಂಡಿ ನಿರ್ಮಿಸಿಲ್ಲ. ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ಖಾಲಿ ನಿವೇಶನಗಳಲ್ಲಿ ಬಳ್ಳಾರಿಜಾಲಿ ಮುಳ್ಳು ಬೆಳೆದು ಹಂದಿಗಳ ವಾಸಸ್ಥಾನವಾಗಿದೆ. ಓವರ್ ಹೆಡ್ಟ್ಯಾಂಕ್ ನಿರ್ಮಿಸುತ್ತೇವೆ ಎಂದು ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ ಎಂದು ನಿವಾಸಿಗಳ ಪರವಾಗಿ ಮಾತನಾಡಿದ ಘಾಟ್ರವಿ ಆರೋಪಿಸಿದರು.<br /> <br /> ಬಡಾವಣೆಯಲ್ಲಿ 25-30 ವರ್ಷಗಳಿಂದ ವಾಸಿಸುತ್ತಿರುವವರಿಗೆ ನಿವೇಶನದ ಹಕ್ಕುಪತ್ರ ನೀಡಿಲ್ಲ. ತಕ್ಷಣ ಹಕ್ಕುಪತ್ರ ನೀಡಿ ಸರ್ಕಾರದ ಯಾವುದಾದರೂ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಬೇಕು. ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದು, ತಕ್ಷಣ ಕಾಮಗಾರಿ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.<br /> <br /> ಪುರಸಭೆಯ ಮುಖ್ಯಾಧಿಕಾರಿ ಚಂದ್ರಶೇಖರಪ್ಪ ಮಾತನಾಡಿ, ಸುಮಾರು 2 ಸಾವಿರ ನಿವೇಶನರಹಿತರಿಗೆ ನಿವೇಶನ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದಷ್ಟು ಬೇಗ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> <br /> ನಾಗರಿಕರು ಸಭೆಯಲ್ಲಿ ನಾಗರಿಕರು ವಿವಿಧ ಬೇಡಿಕೆಗಳನ್ನು ಮಂಡಿಸಿದರು. ಪುರಸಭಾ ಅಧ್ಯಕ್ಷೆ ಮಂಜುಳಾ ವೆಂಕಟೇಶ್ ಕುಂದು- ಕೊರತೆ ಸಭೆ ಉದ್ಘಾಟಿಸಿದರು. ಉಪಾಧ್ಯಕ್ಷೆ ಜ್ಯೋತಿಲಕ್ಷ್ಮೀ ಗೋಪಿಯಾದವ್, ತಹಶೀಲ್ದಾರ್ ಎನ್. ತಿಪ್ಪೇಸ್ವಾಮಿ, ಡಿವೈಎಸ್ಪಿ ಎನ್. ರುದ್ರಮುನಿ, ರಂಗಪ್ಪ, ಫಕೃದ್ದೀನ್ಸಾಬ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>