ಬೆಂಗಳೂರು: ಸಹಾಯಕ ಸರ್ಕಾರಿಪ್ರಾಸಿಕ್ಯೂಟರ್ಗಳ (ಎಪಿಪಿ) ನೇಮಕ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದ ಆರೋಪಿಗಳಾದ 61 ಎಪಿಪಿಗಳು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ತಿರಸ್ಕರಿಸಿದೆ.
ರಾಜ್ಯದ ವಿವಿಧ ಕೋರ್ಟ್ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 61 ಎಪಿಪಿ ಹಾಗೂ ಎಜಿಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರಾದ ಮಂಜುಳಾ ಇಟ್ಟಿ ತಿರಸ್ಕರಿಸಿ ಆದೇಶಿಸಿದ್ದಾರೆ.
2012ರಲ್ಲಿ 197 ಜನ ಎಪಿಪಿಗಳ ಆಯ್ಕೆ ಪ್ರಕ್ರಿಯೆ ವೇಳೆಯ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ವಕೀಲ ಎಚ್.ಟಿ.ರವಿ ಲೋಕಾಯುಕ್ತ ಪೊಲೀಸರಲ್ಲಿ ಖಾಸಗಿ ದೂರು ದಾಖಲಿಸಿದ್ದರು.