<p><strong>ಬೆಂಗಳೂರು: </strong>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ (ಆರ್ಜಿಯುಎಚ್ಎಸ್) ಹಂಗಾಮಿ ಕುಲಪತಿಯಾಗಿ ಡಾ.ಎಸ್.ಎಂ. ಜಯಕರ ಅವರನ್ನು ನೇಮಿಸಿದ ವಿಚಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.</p>.<p>ಜಯಕರ ಅವರ ನೇಮಕಾತಿಯ ಹಿಂದೆ ಅಶ್ವತ್ಥನಾರಾಯಣ ಇದ್ದಾರೆಂದು ಸುಧಾಕರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಹಾಲಿ ಕುಲಪತಿ ಎಸ್. ಸಚ್ಚಿದಾನಂದ ಅವರು ಸೋಮವಾರ (ಜೂನ್ 14) ನಿವೃತ್ತಿಯಾಗಿದ್ದು, ಹಂಗಾಮಿ ಕುಲಪತಿಯಾಗಿ ಜಯಕರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.</p>.<p>‘ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಹಂಗಾಮಿ ಕುಲಪತಿ ನೇಮಕ ನನ್ನ ಗಮನಕ್ಕೇ ಬಂದಿಲ್ಲ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ನಿಂದಾಗಿ ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಜೊತೆ ಈ ಬಗ್ಗೆ ಚರ್ಚಿಸಿದ್ದು, ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರುತ್ತೇನೆ’ ಎಂದು ಸುಧಾಕರ್ ಸೋಮವಾರ ಹೇಳಿದ್ದರು.</p>.<p>‘ಕುಲಪತಿ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ಬಗ್ಗೆ ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ’ ಎಂದೂ ಹೇಳಿದ್ದರು.</p>.<p>ಈ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ ಅಶ್ವತ್ಥನಾರಾಯಣ, ‘ಹಂಗಾಮಿ ಕುಲಪತಿ ನೇಮಕ ಪಾರದರ್ಶಕ, ಕಾನೂನು ಪ್ರಕಾರವೇ ಆಗಿದೆ. ರಾಜ್ಯಪಾಲರು ಈ ನೇಮಕ ಮಾಡಿದ್ದಾರೆ. ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ಕಾನೂನು ವ್ಯಾಪ್ತಿ ಮೀರಿ ನೇಮಕ ಮಾಡಲು ಆಗುವುದಿಲ್ಲ, ನೇಮಕದ ಹಿಂದೆ ನನ್ನ ಪ್ರಭಾವ ಇದೆ ಎನ್ನುವುದು ಸುಳ್ಳು. ಎಲ್ಲ ಊಹಾಪೋಹ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ (ಆರ್ಜಿಯುಎಚ್ಎಸ್) ಹಂಗಾಮಿ ಕುಲಪತಿಯಾಗಿ ಡಾ.ಎಸ್.ಎಂ. ಜಯಕರ ಅವರನ್ನು ನೇಮಿಸಿದ ವಿಚಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.</p>.<p>ಜಯಕರ ಅವರ ನೇಮಕಾತಿಯ ಹಿಂದೆ ಅಶ್ವತ್ಥನಾರಾಯಣ ಇದ್ದಾರೆಂದು ಸುಧಾಕರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಹಾಲಿ ಕುಲಪತಿ ಎಸ್. ಸಚ್ಚಿದಾನಂದ ಅವರು ಸೋಮವಾರ (ಜೂನ್ 14) ನಿವೃತ್ತಿಯಾಗಿದ್ದು, ಹಂಗಾಮಿ ಕುಲಪತಿಯಾಗಿ ಜಯಕರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.</p>.<p>‘ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಹಂಗಾಮಿ ಕುಲಪತಿ ನೇಮಕ ನನ್ನ ಗಮನಕ್ಕೇ ಬಂದಿಲ್ಲ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ನಿಂದಾಗಿ ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಜೊತೆ ಈ ಬಗ್ಗೆ ಚರ್ಚಿಸಿದ್ದು, ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರುತ್ತೇನೆ’ ಎಂದು ಸುಧಾಕರ್ ಸೋಮವಾರ ಹೇಳಿದ್ದರು.</p>.<p>‘ಕುಲಪತಿ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ಬಗ್ಗೆ ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ’ ಎಂದೂ ಹೇಳಿದ್ದರು.</p>.<p>ಈ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ ಅಶ್ವತ್ಥನಾರಾಯಣ, ‘ಹಂಗಾಮಿ ಕುಲಪತಿ ನೇಮಕ ಪಾರದರ್ಶಕ, ಕಾನೂನು ಪ್ರಕಾರವೇ ಆಗಿದೆ. ರಾಜ್ಯಪಾಲರು ಈ ನೇಮಕ ಮಾಡಿದ್ದಾರೆ. ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ಕಾನೂನು ವ್ಯಾಪ್ತಿ ಮೀರಿ ನೇಮಕ ಮಾಡಲು ಆಗುವುದಿಲ್ಲ, ನೇಮಕದ ಹಿಂದೆ ನನ್ನ ಪ್ರಭಾವ ಇದೆ ಎನ್ನುವುದು ಸುಳ್ಳು. ಎಲ್ಲ ಊಹಾಪೋಹ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>