ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುರಾತನ ದೇವಾಲಯಗಳನ್ನು ಒಡೆದು ವಿಗ್ರಹಗಳನ್ನು ಕಸದ ರಾಶಿಯಲ್ಲಿ ಎಸೆದಿರುವುದು ಜನರಿಗೆ ನೋವುಂಟು ಮಾಡಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಆದರೂ, ಹಿಂದೂ ಧರ್ಮವನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿರುವ ಬಿಜೆಪಿ ಹಾಗೂ ಅವರ ಪರಿವಾರದ ಸಂಘಟನೆಗಳು ಪ್ರತಿಭಟನೆಯ ನಾಟಕವಾಡುತ್ತಿವೆ’ ಎಂದು ಟೀಕಿಸಿದರು.