<p><strong>ಶಿವಮೊಗ್ಗ:</strong> ‘ಕಾಂಗ್ರೆಸ್ ರಾಷ್ಟ್ರ ವಿರೋಧಿ ಪಕ್ಷವಾಗಿ ಬೆಳೆಯುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.</p>.<p>ಇಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಸಮಿತಿ ವಿಶೇಷ ಸಭೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಗಲಭೆ ಸೃಷ್ಟಿಯಾಗುವುದನ್ನೇಕಾಂಗ್ರೆಸ್ ಬಯಸುತ್ತದೆ. ಕಾಶ್ಮೀರ ವಿಷಯ, ಅಯೋಧ್ಯೆ ವಿಷಯದಲ್ಲಿಯೂ ಗಲಭೆ ಸೃಷ್ಟಿಯಾಗಲಿಲ್ಲ. ಈಗ ಪೌರತ್ವ ವಿಚಾರದಲ್ಲಿ ಗಲಭೆ ಮಾಡಿ ಲಾಭ ಪಡೆದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸಿ ಬೆಂಕಿ ಹಚ್ಚುತ್ತಿದೆ. ಸಾವರ್ಕರ್ ವಿರುದ್ಧ ಮಾತನಾಡಿದವರು ಯಾರೇ ಆಗಲಿ ಅವರು ರಾಷ್ಟ್ರ ವಿರೋಧಿಗಳು’ ಎಂದು ಆರೋಪಿಸಿದರು.</p>.<p>ರಾಷ್ಟ್ರ ವಿರೋಧಿ ಪಕ್ಷವಾಗಿ ಬೆಳೆಯುತ್ತಿರುವ ಕಾಂಗ್ರೆಸ್, ದೇಶದಲ್ಲಿ ಭಯೋತ್ಪಾದನೆಯನ್ನು ಹುಟ್ಟುಹಾಕುತ್ತಿದೆ.ಅಧಿಕಾರ ಇದ್ದಾಗ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕಾಂಗ್ರೆಸ್, ಅಧಿಕಾರ ಇಲ್ಲದಿದ್ದಾಗ ಗಲಭೆ ಸೃಷ್ಟಿಸುವ ಕೆಲಸವನ್ನು ಮಾಡುತ್ತಿದೆ’ಎಂದು ಕುಟಕಿದರು.</p>.<p>ಇತ್ಮಧ್ಯೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ’ರಾಹುಲ್ ಗಾಂಧಿ ಅವರನ್ನು ಪಾಕಿಸ್ತಾನದ ಏಜೆಂಟ್‘ ಎಂದು ಕರೆದಿದ್ದು, ‘ಕಾಂಗ್ರೆಸ್ ಸಮುದಾಯವನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ‘ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಕಾಂಗ್ರೆಸ್ ರಾಷ್ಟ್ರ ವಿರೋಧಿ ಪಕ್ಷವಾಗಿ ಬೆಳೆಯುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.</p>.<p>ಇಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಸಮಿತಿ ವಿಶೇಷ ಸಭೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಗಲಭೆ ಸೃಷ್ಟಿಯಾಗುವುದನ್ನೇಕಾಂಗ್ರೆಸ್ ಬಯಸುತ್ತದೆ. ಕಾಶ್ಮೀರ ವಿಷಯ, ಅಯೋಧ್ಯೆ ವಿಷಯದಲ್ಲಿಯೂ ಗಲಭೆ ಸೃಷ್ಟಿಯಾಗಲಿಲ್ಲ. ಈಗ ಪೌರತ್ವ ವಿಚಾರದಲ್ಲಿ ಗಲಭೆ ಮಾಡಿ ಲಾಭ ಪಡೆದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸಿ ಬೆಂಕಿ ಹಚ್ಚುತ್ತಿದೆ. ಸಾವರ್ಕರ್ ವಿರುದ್ಧ ಮಾತನಾಡಿದವರು ಯಾರೇ ಆಗಲಿ ಅವರು ರಾಷ್ಟ್ರ ವಿರೋಧಿಗಳು’ ಎಂದು ಆರೋಪಿಸಿದರು.</p>.<p>ರಾಷ್ಟ್ರ ವಿರೋಧಿ ಪಕ್ಷವಾಗಿ ಬೆಳೆಯುತ್ತಿರುವ ಕಾಂಗ್ರೆಸ್, ದೇಶದಲ್ಲಿ ಭಯೋತ್ಪಾದನೆಯನ್ನು ಹುಟ್ಟುಹಾಕುತ್ತಿದೆ.ಅಧಿಕಾರ ಇದ್ದಾಗ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕಾಂಗ್ರೆಸ್, ಅಧಿಕಾರ ಇಲ್ಲದಿದ್ದಾಗ ಗಲಭೆ ಸೃಷ್ಟಿಸುವ ಕೆಲಸವನ್ನು ಮಾಡುತ್ತಿದೆ’ಎಂದು ಕುಟಕಿದರು.</p>.<p>ಇತ್ಮಧ್ಯೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ’ರಾಹುಲ್ ಗಾಂಧಿ ಅವರನ್ನು ಪಾಕಿಸ್ತಾನದ ಏಜೆಂಟ್‘ ಎಂದು ಕರೆದಿದ್ದು, ‘ಕಾಂಗ್ರೆಸ್ ಸಮುದಾಯವನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ‘ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>