ಬೇರೆಬೇರೆ ಭಾಗಗಳಿಂದ ಬಂದಿದ್ದ, ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಊಟ ಸಿಗದೇ ಬಳಲಿದ್ದರು. ವಿಷಯ ತಿಳಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾರ್ಯದರ್ಶಿ ರಂಗಸ್ವಾಮಿ, ಚಂದ್ರಶೇಖರ್, ಜಗತ್, ಲಕ್ಷ್ಮಣಪ್ಪ, ಸ್ಟೆಲ್ಲಾ ಮಾರ್ಟಿನ್, ಕುಮಾರಸ್ವಾಮಿ, ಅರ್ಚನಾ, ಮಂಜುನಾಥ ಗೌಡ, ಸೌಗಂಧಿಕಾ ಮತ್ತಿತರರು ಕೆಎಸ್ಆರ್ಟಿಸಿ ಅಧಿಕಾರಿಗಳ ಜತೆ ಮಾತನಾಡಿ, ಎಲ್ಲ ಪ್ರಯಾಣಿಕರಿಗೂ ಊಟದ ವ್ಯವಸ್ಥೆ ಮಾಡಿದರು.