ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರಪಳಿ

Last Updated 8 ನವೆಂಬರ್ 2019, 12:21 IST
ಅಕ್ಷರ ಗಾತ್ರ

ಶಿವಮೊಗ್ಗ: ಕೇಂದ್ರ ಸರ್ಕಾರ ನೋಟು ರದ್ದು ಮಾಡಿದ ಪ್ರಮಾದದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆನಡೆಸಿದರು.ಕಪ್ಪುಪಟ್ಟಿ ಧರಿಸಿಕಾಂಗ್ರೆಸ್ ಭವನದಿಂದ ಪ್ರತಿಭಟನೆ ಮೆರವಣಿಗೆ ಹೊರಟು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಆಕ್ರೋಶ ವ್ಯಕ್ತಪಡಿಸಿದರು.

ನೋಟ್‌ ರದ್ದತಿ ನಂತರಹಲವು ಕ್ಷೇತ್ರಗಳುತೀವ್ರ ಸ್ವರೂಪದ ಸಮಸ್ಯೆ ಎದುರಿಸುತ್ತಿವೆ. ದಿನದಿಂದ ದಿನಕ್ಕೆ ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತಿದೆನೋಟುಗಳ ಅಮಾನ್ಯದಿಂದ ಮಧ್ಯಮ ವರ್ಗದವರು,ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಆರೋಪಿಸಿದರು.

ಹೆಚ್ಚಿನ ಮೌಲ್ಯದ ನೋಟುಗಳ ರದ್ದತಿಯಿಂದ ದೇಶದಲ್ಲಿ ಕೂಲಿ ಕಾರ್ಮಿಕರಿಗೆ,ಸಣ್ಣ ಉದ್ದಿಮೆದಾರರಿಗೆ ಬಾರಿ ತೊಂದರೆಯಾಗಿದೆ. ವ್ಯಾಪಾರ ವಹಿವಾಟು ಕುಂಠಿತಗೊಂಡಿದೆ.ದಿನದ ದುಡಿಮೆಯನ್ನೇ ನಂಬಿ ಬದುಕುತ್ತಿರುವ ಜನಸಾಮಾನ್ಯರು ಸಂಕಷ್ಟಕ್ಕಿಡಾಗಿದ್ದಾರೆ. ಚಿಲ್ಲರೆ ಸಮಸ್ಯೆ ತಲೆದೋರಿದೆ. ಈ ಎಲ್ಲಸಂಕಷ್ಟಗಳಿಗೆ ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳೇ ಕಾರಣ ಎಂದು ದೂರಿದರು.

ನೋಟುಗಳ ರದ್ದು ನಿರ್ಧಾರಪ್ರಧಾನಿ ಮೋದಿಅವರ ಏಕಪಕ್ಷೀಯ ಕ್ರಮ. ಯಾವುದೇ ಪೂರ್ವಸಿದ್ಧತೆಇಲ್ಲದೆ ಇಂತಹ ನಿರ್ಧಾರ ಕೈಗೊಂಡ ಪರಿಣಾಮದೇಶದ ಆರ್ಥಿಕವ್ಯವಸ್ಥೆಗೆ ದೊಡ್ಡ ಹೊಡೆತ ಬಿದ್ದಿದೆ. ಎರಡು ವರ್ಷಗಳಾದರೂ ದೇಶದ ಆರ್ಥಿಕಸ್ಥಿತಿ ಚೇತರಿಕೆಕಂಡಿಲ್ಲ ಎಂದುಕಳವಳ ವ್ಯಕ್ತಪಡಿಸಿದರು.

ಕಾಂಗ್ರೆಸ್ಜಿಲ್ಲಾ ಘಟಕದಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಹಿಳಾ ಘಟಕದ ಅಧ್ಯಕ್ಷೆಅನಿತಾ ಕುಮಾರಿ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಇಸ್ಮಾಯಿಲ್‌ ಖಾನ್, ಎಸ್‌.ಪಿ.ಶೇಷಾದ್ರಿ, ಎಲ್.ರಾಮೇಗೌಡ, ಮುಕ್ತಿಯಾರ್ ಅಹಮದ್, ತೀ.ನಾ.ಶ್ರೀನಿವಾಸ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT