ದಾವಣಗೆರೆ: ‘ಲಿಂಗಾಯತ ಸ್ವತಂತ್ರ ಧರ್ಮ ಸಿಗುವುದು ಸುಲಭ ಇಲ್ಲ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ವಿಚಾರವಾಗಿ ಅಲ್ಪಸಂಖ್ಯಾತ ಆಯೋಗಕ್ಕೆ ತಜ್ಞರ ಸಮಿತಿ ವರದಿ ಸಲ್ಲಿಸಿರುವ ಕುರಿತು ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಒಂದು ವೇಳೆ ರಾಜ್ಯ ಸರ್ಕಾರ ಶಿಫಾರಸು ಮಾಡಿದರೂ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದು ಕಷ್ಟವಿದೆ. ಚುನಾವಣೆ ವೇಳೆ ಇದೆಲ್ಲಾ ನಡೆಯುತ್ತದೆ. ಮುಂದೆ ಏನೂ ಆಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.