ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಪತಿ ಆತ್ಮಹತ್ಯೆ

Last Updated 14 ಅಕ್ಟೋಬರ್ 2019, 16:36 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಸಮೀಪದ ಅಗರದಹಳ್ಳಿ ಕ್ಯಾಂಪ್‌ನಲ್ಲಿ ವೈಯಕ್ತಿಕ ಕಾರಣಗಳಿಂದ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಭೂಮಿ ಹುಣ್ಣಿಮೆ ಪ್ರಯುಕ್ತ ಕುಟುಂಬದವರು ತೋಟಕ್ಕೆ ಊಟಕ್ಕೆ ಹೋಗುವಾಗ ಸಂತೋಷ್ (32) ಹಾಗೂ ಪಾರ್ವತಿ (24) ತಡವಾಗಿ ಬರುವುದಾಗಿ ತಿಳಿಸಿದ್ದರು. ಮನೆಯವರು ಬಂದು ನೋಡಿದಾಗ ಇಬ್ಬರೂ ಒಂದೇ ಸೀರೆಗೆ ನೇಣು ಹಾಕಿಕೊಂಡಿದ್ದರು ಎಂದು ಸಂತೋಷ್‌ ಸಹೋದರ ಈಶ್ವರ್ ತಿಳಿಸಿದರು.

ಕ್ಯಾಂಪ್‌ನಲ್ಲಿ ಎಗ್‌ರೈಸ್ ಅಂಗಡಿ ನಡೆಸುತ್ತಿದ್ದ ಸಂತೋಷ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮಕ್ಕಳಿರಲಿಲ್ಲ. ವೈಯಕ್ತಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT