ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ‘ಕೊರೊನಾ ಸೋಂಕಿತರನ್ನು ತ್ವರಿತವಾಗಿ ಪತ್ತೆಮಾಡಿ, ಆರೈಕೆ ನೀಡಬೇಕು. ಹೀಗಾಗಿ, ಪರೀಕ್ಷಾ ಕಾರ್ಯತಂತ್ರವನ್ನು ಪರಿಷ್ಕರಿಸಲಾಗಿದೆ. ಕೋವಿಡ್ ಪೀಡಿತ ವ್ಯಕ್ತಿಗಳ ಸಂಪರ್ಕಿತರು ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಅನಾರೊಗ್ಯ ಸಮಸ್ಯೆ ಎದುರಿಸುತ್ತಿದ್ದರೆ ಅಂತಹವರಿಗೆ ಸಮುದಾಯದ ಹಂತದಲ್ಲಿ ಪರೀಕ್ಷೆ ನಡೆಸಬೇಕು. ವಿದೇಶಕ್ಕೆ ತೆರಳುತ್ತಿರುವ ವ್ಯಕ್ತಿಗಳು ಹಾಗೂ ವಿದೇಶದಿಂದ ಬಂದವರಿಗೂ ಪರೀಕ್ಷೆ ಮಾಡಬೇಕು’ ಎಂದು ಹೇಳಿದ್ದಾರೆ.