ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊರಿಕ್ಷಾ ಚಾಲಕನ ಮೇಲೆ ಹಲ್ಲೆ

Last Updated 10 ಜನವರಿ 2019, 15:31 IST
ಅಕ್ಷರ ಗಾತ್ರ

ಶಿವಮೊಗ್ಗ:ಸರಕು ಸಾಗಣೆ ಆಟೊರಿಕ್ಷಾ ಬಾಡಿಗೆಗೆ ಪಡೆದಿದ್ದ ಇಬ್ಬರು ಆರೋಪಿಗಳು ಬುಧವಾರ ರಾತ್ರಿ ಶಾರದಾ ಅಂಧರ ಶಾಲೆಯ ಹತ್ತಿರ ಚಾಲಕನ ಮೇಲೆ ಹಲ್ಲೆ ನಡೆಸಿ, ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಹೊಳಲೂರಿನ ಮನ್ಸೂರ್ (35) ಹಲ್ಲೆಗೆ ಒಳಗಾದವರು.

ಕಣ್ಣಿಗೆ ಕಾರದ ಪುಡಿ ಎರಚಿ, ಬ್ಲೇಡಿನಿಂದ ಮೈ, ಕೈ ಕೊಯ್ದಿದ್ದಾರೆ. ನಂತರ ಅವರ ಬಳಿ ಇದ್ದ ₨ 13 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ಪ್ರಕರಣ ತುಂಗಾನಗರ ಠಾಣೆಯಲ್ಲಿ ದಾಖಲಾಗಿದೆ.

ಹಮಾಲಿ ಕಾರ್ಮಿಕನಿಗೆ ಇರಿತ

ಶಿವಮೊಗ್ಗ:ಹಮಾಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಕಾರ್ಮಿಕನನ್ನು ಅಡ್ಡಗಟ್ಟಿದದುಷ್ಕರ್ಮಿಗಳುಮದಾರಿಪಾಳ್ಯದಬಳಿಚಾಕುವಿನಿಂದ ಇರಿದಿದ್ದಾರೆ.

ಸೀಗೆಹಟ್ಟಿ ಆಶೀಕ್ಹಲ್ಲೆಗೆ ಒಳಗಾದವರು. ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT