ಶಿವಮೊಗ್ಗ: ತಾಲ್ಲೂಕಿನ ಕುಂಚೇನಹಳ್ಳಿ ಗ್ರಾಮದ ಬಗರ್ಹುಕುಂ ಜಮೀನಿನಲ್ಲಿ ಮೆಕ್ಕೆಜೋಳದ ನಡುವೆ ಅಕ್ರಮವಾಗಿ ಗಾಂಜಾ ಬೆಳೆದಿದ್ದಆರೋಪಿಗೆಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ಕು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ ತೀರ್ಪುನೀಡಿದೆ.
ಸೇವ್ಯಾನಾಯ್ಕ ಗಾಂಜಾ ಬೆಳೆದ ಆರೋಪಿ. ಅವರ ಜಮೀನಿಗೆ 2016ರಂದು ದಾಳಿ ಮಾಡಿದ್ದ ಅಬಕಾರಿ ನಿರೀಕ್ಷಕ ಡಿ.ಎನ್.ಹನುಮಂತಪ್ಪ 420 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದರು.
ನ್ಯಾಯಧೀಶರಾದ ಪ್ರಭಾವತಿ ಎಂ. ಹಿರೇಮಠ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲ ವಿ.ಜಿ.ಯಳಗೇರಿ ವಾದ ಮಂಡಿಸಿದ್ದರು.