ಎರಡು ಕುಟುಂಬಗಳ ನಡುವಿನ ದ್ವೇಷದ ಕಾರಣ ಪ್ರಸಕ್ತ ವರ್ಷದ ಜನವರಿ 30ರಂದು ಗಾರ್ಡನ್ ಏರಿಯಾ 2ನೇ ಕ್ರಾಸ್ನಲ್ಲಿ ಗೋವಿಂದ ಲಕ್ಷ್ಮೀನಾರಾಯಣನ ಹತ್ಯೆ ನಡೆದಿತ್ತು. ಪ್ರಕರಣ ನಡೆದ ನಂತರ ಆರೋಪಿಗಳಾದ ಚೇತನ್, ಸಂಜಯ್, ಮಂಜುನಾಥ್, ರಿಜ್ವಾನ್, ಸಂದೇಶ್, ಪ್ರೇಮರಾಜ್, ಶಿವರಾಜ್, ಲಕ್ಷ್ಮಮ್ಮ ಅವರನ್ನುಬಂಧಿಸಲಾಗಿತ್ತು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಈಗ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಮಾಹಿತಿ ನೀಡಿದರು.