ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೀಸಲಾತಿ ಚರ್ಚೆಯೇ ಅನಗತ್ಯ. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಬೇಕೇಬೇಕು. ಸಮಾಜದಲ್ಲಿರುವ ದಮನಿತರು, ಶೋಷಿತರಿಗೆ ಮೀಸಲಾತಿಯ ಅವಶ್ಯಕತೆ ಇದೆ. ಹೀಗಾಗಿ, ಭಾಗವತ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ’ ಎಂದು ಖಾರವಾಗಿ ಹೇಳಿದರು.