ಕವಿತಾ ಕೃಷ್ಣ ಅವರು ವೃತ್ತಿಯಲ್ಲಿ ಕನ್ನಡ ಪಂಡಿತರು. ಪ್ರವೃತ್ತಿಯಲ್ಲಿ ಸಾಹಿತಿಗಳು ಹಾಗೂ ಉತ್ತಮ ಭಾಷಣಕಾರರು ಆಗಿದ್ದಾರೆ. ಶೈಕ್ಷಣಿಕ ಧಾರ್ಮಿಕ ಸಾಮಾಜಿಕ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಕಥೆ, ಕವನ, ಕಾದಂಬರಿ ಚರಿತ್ರೆ, ಶಿಕ್ಷಣ, ನಾಟಕ, ಸಂಶೋಧನೆ, ಸಂಪಾದನೆ, ಮಕ್ಕಳ ಸಾಹಿತ್ಯ ಹೀಗೆ ಅನೇಕ ಪ್ರಕಾರಗಳ ಸಾಹಿತ್ಯ ಕೃಷಿ ಮಾಡಿದ್ದು, 188 ಕೃತಿಗಳನ್ನು ಬರೆದಿದ್ದಾರೆ.