ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಾರಿಕಾ ಬೋಟ್‌ನ ಎಂಜಿನ್‌ ವೈಫಲ್ಯ: 10 ಮೀನುಗಾರರ ರಕ್ಷಣೆ

Last Updated 27 ಮೇ 2021, 12:33 IST
ಅಕ್ಷರ ಗಾತ್ರ

ಮಂಗಳೂರು: ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ 10 ಮೀನುಗಾರರನ್ನು ಇಲ್ಲಿನ ಕಡಲ ತೀರದಿಂದ 20 ನಾಟಿಕಲ್‌ ಮೈಲಿ ದೂರದಲ್ಲಿ ರಕ್ಷಣೆ ಮಾಡಲಾಗಿದೆ.

ತಮಿಳುನಾಡಿನ ಲಾರ್ಡ್ ಆಫ್ ದಿ ಓಷಿಯನ್ ಬೋಟ್, ಎಂಜಿನ್ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿತ್ತು.

ಮಾಹಿತಿ ಪಡೆದ ಕರಾವಳಿ ಕಾವಲು ಪಡೆ, ಐಸಿಜಿ ರಾಜದೂತ್‌ ಹಡಗನ್ನು ಸ್ಥಳಕ್ಕೆ ಕಳುಹಿಸಿತ್ತು. ರಾಜದೂತ್‌ ಹಡಗಿನ ಮೂಲಕ ಸಮುದ್ರದಲ್ಲಿ ಸಿಲುಕಿದ್ದ ಬೋಟ್‌ ಹಾಗೂ ಅದರಲ್ಲಿದ್ದ 10 ಜನ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ ತರಲಾಗಿದೆ.

ಈ ಯಾಂತ್ರಿಕೃತ ಬೋಟ್ ಮೇ 14 ರಂದು ಪೋರಬಂದರ್‌ನಲ್ಲಿ ಲಂಗರು ಹಾಕಿತ್ತು. ಮೇ 19 ರಂದು ಪೋರಬಂದರ್‌ನಿಂದ ಹೊರಟ ಬೋಟ್‌, ಮಂಗಳೂರು ಸಮೀಪದ ಎಂಜಿನ್‌ ವೈಫಲ್ಯಕ್ಕೆ ಒಳಗಾಗಿತ್ತು.

ಮೀನುಗಾರರು ಹಾಗೂ ಬೋಟ್ ಅನ್ನು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್ ವೆಂಕಟೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT