ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಮಾಮ್‌ನಿಂದ ಬಂದ 191 ಮಂದಿ

Last Updated 9 ಜುಲೈ 2020, 17:01 IST
ಅಕ್ಷರ ಗಾತ್ರ

ಮಂಗಳೂರು: ಸೌದಿ ಅರೇಬಿಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಆಯೋಜನೆ ಮಾಡಿದ್ದ ಪ್ರಥಮ ಬಾಡಿಗೆ ವಿಮಾನ ಗುರುವಾರ ಸಂಜೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ತುರ್ತು ಚಿಕಿತ್ಸೆ ಅಗತ್ಯ ಇರುವವರು, ಗರ್ಭಿಣಿಯರು, ಮಕ್ಕಳು ಸೇರಿದಂತೆ 191 ಪ್ರಯಾಣಿಕರನ್ನು ಹೊತ್ತ ವಿಮಾನ ದಮಾಮ್‌ನಿಂದ ಹೊರಟಿತ್ತು. ಸಂಜೆ ಸುರಕ್ಷಿತವಾಗಿ ಮಂಗಳೂರು ತಲುಪಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರನ್ನು ಪ್ರಾಥಮಿಕ ಆರೋಗ್ಯ ತಪಾಸಣೆ ಒಳಪಡಿಸಲಾಗಿದೆ. ಅಲ್ಲದೇ ಆಯಾ ಜಿಲ್ಲೆಗಳಲ್ಲಿ ಹೋಟೆಲ್‌ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಕೆಸಿಎಫ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT