<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್ನ ಆವರಣ ಗೋಡೆ ಕುಸಿದು ಎರಡು ಕಾರುಗಳು ಜಖಂಗೊಂಡಿದ್ದು, ಒಂದು ಕೈಗಾಡಿ ಶನಿವಾರ ಸಂಜೆ ಹಾನಿಗೊಳಗಾಗಿದೆ.</p><p>ಗೋಡೆ ಕುಸಿದ ಸಂದರ್ಭದಲ್ಲಿ ವಾಹನದಲ್ಲಿ ಯಾರೂ ಇಲ್ಲದ ಕಾರಣ ಮತ್ತು ಆವರಣ ಗೋಡೆ ಬದಿಯಲ್ಲಿ ಎರಡೇ ವಾಹನಗಳು ಇದ್ದ ಕಾರಣ ಹೆಚ್ಚಿನ ಅನಾಹುತ ಸಂಭವಿಸುವುದು ತಪ್ಪಿದಂತಾಗಿದೆ.</p>.ಮಂಗಳೂರು | ಧಾರಾಕಾರ ಮಳೆ: ಮರಬಿದ್ದು 2 ಕಾರುಗಳು ಜಖಂ.<p>ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಆವರಣಗೋಡೆ ಒದ್ದೆಯಾಗಿತ್ತು. ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಕೇರಳದ ಕುಟುಂಬವೊಂದು ಆವರಣ ಗೋಡೆ ಪಕ್ಕ ಕಾರು ನಿಲ್ಲಿಸಿದ್ದರು. ಆವರಣ ಗೋಡೆಯ ಕೆಂಪುಕಲ್ಲುಗಳಡಿ ಸಿಲುಕಿ ಈ ಕಾರುಗಳ ಗಾಜುಗಳು ನಜ್ಜುಗುಜ್ಜಾಗಿವೆ. ಸ್ಥಳದಲ್ಲಿದ್ದ ಬೇಲ್ಪುರಿ ಮಾರಾಟದ ಗಾಡಿ ಕಲ್ಲಿನಡಿಗೆ ಸಿಕ್ಕಿ ಸಂಪೂರ್ಣ ಹಾನಿಗೊಂಡಿದೆ. ಬೇಲ್ಪುರಿ ಮಾರುವವ ಎರಡು ದಿನಗಳ ಹಿಂದೆ ಸ್ಥಳಕ್ಕೆ ₹ 15 ಸಾವಿರ ಪಾವತಿ ಮಾಡಿ ಆವರಣ ಗೋಡೆ ಪಕ್ಕದಲ್ಲಿ ಕೈಗಾಡಿಯನ್ನು ನಿಲ್ಲಿಸಿದ್ದ. ಆ ಕೈಗಾಡಿ ಕಲ್ಲುಗಳ ಅಡಿ ಸಿಲುಕಿ ಅಪ್ಪಚ್ಚಿಯಾಗಿದೆ.</p>.ಎನ್.ಆರ್.ಪುರ | ಮಳೆ–ಗಾಳಿ: ಮರ ಬಿದ್ದು ಮಹಿಳೆ ಸಾವು, ಕಾರು ಜಖಂ. <p>ವಾಹನಗಳು ಕಡಿಮೆಯಿತ್ತು: ಆಸ್ಪತ್ರೆಗೆ ರೋಗಿಗಳನ್ನು ಕರೆತರುವವರು ಖಾಸಗಿ ಜಾಗದಲ್ಲಿ ಹಣ ಪಾವತಿ ಮಾಡಿ ಕಾರು ನಿಲುಗಡೆ ಮಾಡಲು ವಕಾಶ ಕಲ್ಪಿಸಲಾಗಿತ್ತು. ಪ್ರತೀ ದಿನ ಈ ಜಾಗದ ಪಕ್ಕದಲ್ಲಿರುವ ಮರದ ಮಿಲ್ಲಿನ ಆವರಣಗೋಡೆಯ ಬಳಿ ಆರೇಳು ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿತ್ತು. ಶನಿವಾರ ಇಲ್ಲಿ ಎರಡು ಕಾರುಗಳನ್ನು ಮಾತ್ರ ನಿಲುಗಡೆ ಮಾಡಲಾಗಿತ್ತು. ಆವರಣಗೋಡೆಯ ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಯಾವುದೇ ಹಾನಿ ಆಗಿಲ್ಲ.</p>.ಮುಂಬೈ ನಂತರ ಪುಣೆಯಲ್ಲಿ ಹೋರ್ಡಿಂಗ್ ದುರಂತ: ಮಿನಿ ಟ್ರಕ್ ಜಖಂ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್ನ ಆವರಣ ಗೋಡೆ ಕುಸಿದು ಎರಡು ಕಾರುಗಳು ಜಖಂಗೊಂಡಿದ್ದು, ಒಂದು ಕೈಗಾಡಿ ಶನಿವಾರ ಸಂಜೆ ಹಾನಿಗೊಳಗಾಗಿದೆ.</p><p>ಗೋಡೆ ಕುಸಿದ ಸಂದರ್ಭದಲ್ಲಿ ವಾಹನದಲ್ಲಿ ಯಾರೂ ಇಲ್ಲದ ಕಾರಣ ಮತ್ತು ಆವರಣ ಗೋಡೆ ಬದಿಯಲ್ಲಿ ಎರಡೇ ವಾಹನಗಳು ಇದ್ದ ಕಾರಣ ಹೆಚ್ಚಿನ ಅನಾಹುತ ಸಂಭವಿಸುವುದು ತಪ್ಪಿದಂತಾಗಿದೆ.</p>.ಮಂಗಳೂರು | ಧಾರಾಕಾರ ಮಳೆ: ಮರಬಿದ್ದು 2 ಕಾರುಗಳು ಜಖಂ.<p>ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಆವರಣಗೋಡೆ ಒದ್ದೆಯಾಗಿತ್ತು. ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಕೇರಳದ ಕುಟುಂಬವೊಂದು ಆವರಣ ಗೋಡೆ ಪಕ್ಕ ಕಾರು ನಿಲ್ಲಿಸಿದ್ದರು. ಆವರಣ ಗೋಡೆಯ ಕೆಂಪುಕಲ್ಲುಗಳಡಿ ಸಿಲುಕಿ ಈ ಕಾರುಗಳ ಗಾಜುಗಳು ನಜ್ಜುಗುಜ್ಜಾಗಿವೆ. ಸ್ಥಳದಲ್ಲಿದ್ದ ಬೇಲ್ಪುರಿ ಮಾರಾಟದ ಗಾಡಿ ಕಲ್ಲಿನಡಿಗೆ ಸಿಕ್ಕಿ ಸಂಪೂರ್ಣ ಹಾನಿಗೊಂಡಿದೆ. ಬೇಲ್ಪುರಿ ಮಾರುವವ ಎರಡು ದಿನಗಳ ಹಿಂದೆ ಸ್ಥಳಕ್ಕೆ ₹ 15 ಸಾವಿರ ಪಾವತಿ ಮಾಡಿ ಆವರಣ ಗೋಡೆ ಪಕ್ಕದಲ್ಲಿ ಕೈಗಾಡಿಯನ್ನು ನಿಲ್ಲಿಸಿದ್ದ. ಆ ಕೈಗಾಡಿ ಕಲ್ಲುಗಳ ಅಡಿ ಸಿಲುಕಿ ಅಪ್ಪಚ್ಚಿಯಾಗಿದೆ.</p>.ಎನ್.ಆರ್.ಪುರ | ಮಳೆ–ಗಾಳಿ: ಮರ ಬಿದ್ದು ಮಹಿಳೆ ಸಾವು, ಕಾರು ಜಖಂ. <p>ವಾಹನಗಳು ಕಡಿಮೆಯಿತ್ತು: ಆಸ್ಪತ್ರೆಗೆ ರೋಗಿಗಳನ್ನು ಕರೆತರುವವರು ಖಾಸಗಿ ಜಾಗದಲ್ಲಿ ಹಣ ಪಾವತಿ ಮಾಡಿ ಕಾರು ನಿಲುಗಡೆ ಮಾಡಲು ವಕಾಶ ಕಲ್ಪಿಸಲಾಗಿತ್ತು. ಪ್ರತೀ ದಿನ ಈ ಜಾಗದ ಪಕ್ಕದಲ್ಲಿರುವ ಮರದ ಮಿಲ್ಲಿನ ಆವರಣಗೋಡೆಯ ಬಳಿ ಆರೇಳು ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿತ್ತು. ಶನಿವಾರ ಇಲ್ಲಿ ಎರಡು ಕಾರುಗಳನ್ನು ಮಾತ್ರ ನಿಲುಗಡೆ ಮಾಡಲಾಗಿತ್ತು. ಆವರಣಗೋಡೆಯ ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಯಾವುದೇ ಹಾನಿ ಆಗಿಲ್ಲ.</p>.ಮುಂಬೈ ನಂತರ ಪುಣೆಯಲ್ಲಿ ಹೋರ್ಡಿಂಗ್ ದುರಂತ: ಮಿನಿ ಟ್ರಕ್ ಜಖಂ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>