<p><strong>ಮೂಲ್ಕಿ</strong>: ಸಸಿಹಿತ್ಲುವಿನಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ಇಬ್ಬರು ಯುವಕರು ಭಾನುವಾರ ಸಮುದ್ರ ಪಾಲಾಗಿದ್ದಾರೆ.</p>.<p>ಏಳು ಮಂದಿಯ ತಂಡದಲ್ಲಿದ್ದ ನಾಲ್ಕು ಮಂದಿ ಯುವಕರು ಸಮುದ್ರಕ್ಕೆ ಇಳಿದಿದ್ದು, ಸಮುದ್ರದ ಅಲೆಗೆ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಅಲೆಗೆ ಸಿಲುಕಿ ನಾಪತ್ತೆಯಾಗಿದ್ದಾರೆ.</p>.<p>ಬಜ್ಪೆಯ ಸಿದ್ಧಾರ್ಥ ನಗರದ ಸುಜಿತ್ (32), ಕಾವೂರು ನಿವಾಸಿ ಗುರುಪ್ರಸಾದ್ (28) ಸಮುದ್ರದಲ್ಲಿ ನಾಪತ್ತೆಯಾದವರು. ಬಜ್ಪೆಯ ಸೃಜನ್ ಹಾಗೂ ಕಾರ್ತಿಕ್ ಎಂಬುವರನ್ನು ಸ್ಥಳೀಯ ಗಂಗಾಧರ ಪುತ್ರನ್ ಹಾಗೂ ತಂಡ ಸದಸ್ಯರು ರಕ್ಷಿಸಿದ್ದಾರೆ. ಇವರಲ್ಲಿ ಸೃಜನ್ ತೀವ್ರ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಬಜ್ಪೆ ಯುವ ಟೈಗರ್ ತಂಡದ ಸ್ಪರ್ಧಾಳುಗಳಾದ ಇವರು ಸ್ಪರ್ಧೆಯ ಮೊದಲನೇ ಸುತ್ತಿನಲ್ಲಿಯೇ ಸೋತಿದ್ದರಿಂದ ನಾಲ್ಕು ಮಂದಿ ಸಸಿಹಿತ್ಲಿನ ಅಗ್ಗಿದಕಳಿಯ ಎಂಬಲ್ಲಿಗೆ ಬಂದು ಸಮುದ್ರದಲ್ಲಿ ಈಜಾಡಲು ಪ್ರಾರಂಭಿಸಿದ್ದರು. ಸ್ಥಳೀಯರು ಎಚ್ಚರಿಸಿದರೂ ಇವರು ನಿರ್ಲಕ್ಷಿಸಿದ್ದರು.</p>.<p>ಸಮುದ್ರ ತೀರದಿಂದ 1 ಕಿ.ಮೀ ದೂರದ ಬಾಕಿಮಾರು ಗದ್ದೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸಂಯೋಜಕರು ಆಗಾಗ ಧ್ವನಿ ವರ್ಧಕದಲ್ಲಿ ಸಮುದ್ರದತ್ತ ಹೋಗಬೇಡಿ ಎಂದು ಎಚ್ಚರಿಸುತ್ತಿದ್ದರು. ಸ್ಥಳೀಯ ಮೀನುಗಾರ ಮಹಿಳೆಯರು ಕೂಡ ಈ ತಂಡಕ್ಕೆ ಎಚ್ಚರಿಕೆಯನ್ನು ನೀಡಿದ್ದರು. ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ</strong>: ಸಸಿಹಿತ್ಲುವಿನಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ಇಬ್ಬರು ಯುವಕರು ಭಾನುವಾರ ಸಮುದ್ರ ಪಾಲಾಗಿದ್ದಾರೆ.</p>.<p>ಏಳು ಮಂದಿಯ ತಂಡದಲ್ಲಿದ್ದ ನಾಲ್ಕು ಮಂದಿ ಯುವಕರು ಸಮುದ್ರಕ್ಕೆ ಇಳಿದಿದ್ದು, ಸಮುದ್ರದ ಅಲೆಗೆ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಅಲೆಗೆ ಸಿಲುಕಿ ನಾಪತ್ತೆಯಾಗಿದ್ದಾರೆ.</p>.<p>ಬಜ್ಪೆಯ ಸಿದ್ಧಾರ್ಥ ನಗರದ ಸುಜಿತ್ (32), ಕಾವೂರು ನಿವಾಸಿ ಗುರುಪ್ರಸಾದ್ (28) ಸಮುದ್ರದಲ್ಲಿ ನಾಪತ್ತೆಯಾದವರು. ಬಜ್ಪೆಯ ಸೃಜನ್ ಹಾಗೂ ಕಾರ್ತಿಕ್ ಎಂಬುವರನ್ನು ಸ್ಥಳೀಯ ಗಂಗಾಧರ ಪುತ್ರನ್ ಹಾಗೂ ತಂಡ ಸದಸ್ಯರು ರಕ್ಷಿಸಿದ್ದಾರೆ. ಇವರಲ್ಲಿ ಸೃಜನ್ ತೀವ್ರ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಬಜ್ಪೆ ಯುವ ಟೈಗರ್ ತಂಡದ ಸ್ಪರ್ಧಾಳುಗಳಾದ ಇವರು ಸ್ಪರ್ಧೆಯ ಮೊದಲನೇ ಸುತ್ತಿನಲ್ಲಿಯೇ ಸೋತಿದ್ದರಿಂದ ನಾಲ್ಕು ಮಂದಿ ಸಸಿಹಿತ್ಲಿನ ಅಗ್ಗಿದಕಳಿಯ ಎಂಬಲ್ಲಿಗೆ ಬಂದು ಸಮುದ್ರದಲ್ಲಿ ಈಜಾಡಲು ಪ್ರಾರಂಭಿಸಿದ್ದರು. ಸ್ಥಳೀಯರು ಎಚ್ಚರಿಸಿದರೂ ಇವರು ನಿರ್ಲಕ್ಷಿಸಿದ್ದರು.</p>.<p>ಸಮುದ್ರ ತೀರದಿಂದ 1 ಕಿ.ಮೀ ದೂರದ ಬಾಕಿಮಾರು ಗದ್ದೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸಂಯೋಜಕರು ಆಗಾಗ ಧ್ವನಿ ವರ್ಧಕದಲ್ಲಿ ಸಮುದ್ರದತ್ತ ಹೋಗಬೇಡಿ ಎಂದು ಎಚ್ಚರಿಸುತ್ತಿದ್ದರು. ಸ್ಥಳೀಯ ಮೀನುಗಾರ ಮಹಿಳೆಯರು ಕೂಡ ಈ ತಂಡಕ್ಕೆ ಎಚ್ಚರಿಕೆಯನ್ನು ನೀಡಿದ್ದರು. ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>