ಬಜ್ಪೆಯ ಸಿದ್ಧಾರ್ಥ ನಗರದ ಸುಜಿತ್ (32), ಕಾವೂರು ನಿವಾಸಿ ಗುರುಪ್ರಸಾದ್ (28) ಸಮುದ್ರದಲ್ಲಿ ನಾಪತ್ತೆಯಾದವರು. ಬಜ್ಪೆಯ ಸೃಜನ್ ಹಾಗೂ ಕಾರ್ತಿಕ್ ಎಂಬುವರನ್ನು ಸ್ಥಳೀಯ ಗಂಗಾಧರ ಪುತ್ರನ್ ಹಾಗೂ ತಂಡ ಸದಸ್ಯರು ರಕ್ಷಿಸಿದ್ದಾರೆ. ಇವರಲ್ಲಿ ಸೃಜನ್ ತೀವ್ರ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.