ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿನ ದರ್ಗಾಕ್ಕೆ ಬಂದಿದ್ದ ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಮೂವರು ಯುವಕರು ಸಮುದ್ರಕ್ಕೆ ಇಳಿದಿದ್ದು, ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದೆ. ಅವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರನ್ನು ಹುಡುಕಾಟ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಅಲಿ (27) ಎಂಬುವವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ನಂತರ ಸಮುದ್ರ ತೀರಕ್ಕೆ ತೆರಳಿದ್ದರು. ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ವೇಳೆ ಮೂವರೂ ಅಲೆಗಳ ನಡುವೆ ಸಿಲುಕಿದ್ದಾರೆ.
ತಕ್ಷಣ ಸ್ಥಳದಲ್ಲಿದ್ದ ಮೊಗವೀರ ಜೀವರಕ್ಷಕ ಸದಸ್ಯರು ಸಮುದ್ರಕ್ಕೆ ಧುಮುಕಿ ಸೈಫ್ ಅಲಿ ಮತ್ತು ಸಲ್ಮಾನ್ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಲ್ಮಾನ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಬಶೀರ್ ನೀರಿನಲ್ಲಿ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.