<p><strong>ಮಂಗಳೂರು</strong>: ಜಿಲ್ಲೆಯಲ್ಲಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶೇ 20ರಷ್ಟು ನುರಿತ ಮೀನುಗಾರರಿಗೆ ಕರಾವಳಿ ಕಾವಲು ಪಡೆಯಲ್ಲಿ ಉದ್ಯೋಗ ಮೀಸಲಿಡುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಮಂಗಳವಾರ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಿಸಾನ್ ಕಾರ್ಡ್ ಮೂಲಕ ಕೃಷಿಕರಿಗೆ ಹೆಚ್ಚು ಸೌಲಭ್ಯಗಳು ದೊರಕುತ್ತಿದೆ. ಆದರೆ ಕೃಷಿಯಲ್ಲೇ ಮೀನುಗಾರಿಕೆಯೂ ಒಂದು ಭಾಗವಾಗಿದ್ದು, ಕೃಷಿಕರಿಗೆ ಸಿಗುವಷ್ಟು ಸವಲತ್ತು ಮೀನುಗಾರಿಗೆ ಸಿಗುತ್ತಿಲ್ಲ. ಮೀನುಗಾರರಿಗೂ ಕಿಸಾನ್ ಕಾರ್ಡ್ನಲ್ಲಿ ಸೌಲಭ್ಯ ಒದಗಿಸುವಂತೆ ಸಂವಾದದಲ್ಲಿ ಕೆಲವು ಕೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮೀನುಗಾರಿಕೆ ನಿರ್ದೇಶಕರು, ಲೀಡ್ ಬ್ಯಾಂಕ್ ಮ್ಯಾನೇಜರ್, ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಉದ್ಘಾಟಿಸಿ ಮಾತನಾಡಿದ ಸಂಸದ ನಳಿನ್ಕುಮಾರ್ ಕಟೀಲ್, ಈ ಕಾರ್ಯಕ್ರಮದ ಮೂಲಕ ಸಾಕಷ್ಟು ಪರಿಣಿತರ ಅಭಿಪ್ರಾಯ ಪಡೆಯಲಾಗುವುದು. ಅವುಗಳನ್ನು ಕ್ರೋಡೀಕರಿಸಿ ಮೀನುಗಾರಿಕೆಯ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಯನ್ನು ಮುಂದಿಟ್ಟುಕೊಂಡು ಒಳ್ಳೆಯ ಯೋಜನೆ ಕಾರ್ಯಗತ ಮಾಡಲಾಗುವುದು. ಅದುವೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಕರಾವಳಿಯಲ್ಲಿ 3.28 ಲಕ್ಷ ಮೀನುಗಾರರಿದ್ದು, ಸಕ್ರಿಯ ಮೀನುಗಾರರ ಸಂಖ್ಯೆ 1.57 ಲಕ್ಷವಾಗಿದೆ. 8 ಮೀನುಗಾರಿಕಾ ಬಂದರು, 26 ಮೀನುಗಾರಿಕಾ ಇಳಿದಾಣ ಕೇಂದ್ರಗಳು, 128 ಮೀನು ಸಹಕಾರಿ ಸಂಘಗಳು, 1 ಮೀನು ಅಭಿವೃದ್ಧಿ ನಿಗಮ, 2 ಮೀನು ಮಾರಾಟ ಮಂಡಳಿಗಳಿವೆ. 4,585 ಯಾಂತ್ರೀಕೃತ ದೋಣಿಗಳು, 9,362 ಮೋಟಾರೀಕೃತ ದೋಣಿಗಳು, 9,097 ನಾಡ ದೋಣಿಗಳಿವೆ ಎಂದು ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬ್ರಹ್ಮಚಾರಿ ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಾರವಾರ ಶಾಸಕಿ ರೂಪಾಲಿ ನಾಯ್ಕ್, ಕಾಪು ಶಾಸಕ ಲಾಲಾಜಿ ಮೆಂಡನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೀನುಗಾರಿಕೆ ನಿರ್ದೇಶಕ ರಾಮಕೃಷ್ಣ ವೇದಿಕೆಯಲ್ಲಿದ್ದರು.</p>.<p class="Briefhead"><strong>ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್</strong><br />ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು, ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಮೀನುಗಾರರ ರಕ್ಷಣೆ ಹಾಗೂ ಅವರ ಮಾಹಿತಿಯನ್ನು ಕಲೆ ಹಾಕುವ ದೃಷ್ಟಿಯಿಂದ ಕ್ಯೂ ಆರ್ ಕೋಡ್ ಆಧಾರಿತ ಬಯೋಮೆಟ್ರಿಕ್ ಕಾರ್ಡ್ಗಳನ್ನು ಹೊಂದುವುದು ಕಡ್ಡಾಯವಾಗಿದೆ. ಜಿಲ್ಲಾಡಳಿತದ ವತಿಯಿಂದ ‘ಸೇವಾ ಸಿಂಧು ಪೋರ್ಟಲ್’ ವೆಬ್ಸೈಟ್ನಲ್ಲಿ ಈ ಕಾರ್ಡ್ ಒದಗಿಸಲು ಅಥವಾ ಆಯಾ ಮೀನುಗಾರಿಕಾ ಇಲಾಖೆಯಲ್ಲಿ ದೊರಕುವಂತೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.</p>.<p>***<br />ದೋಣಿಗಳಿಗೆ ಕಲರ್ ಕೋಡಿಂಗ್ ವ್ಯವಸ್ಥೆ ರೂಪಿಸಿದ್ದು, ಇದರಲ್ಲಿ ಸಮಸ್ಯೆ ಇದ್ದರೆ ಎಲ್ಲ ಮೀನುಗಾರರು ಮನವಿ ಸಲ್ಲಿಸಿದಲ್ಲಿ ಅದರಂತೆ ಕ್ರಮ ಕೈಗೊಳ್ಳಲಾಗುವುದು.<br /><em><strong>–ಚೇತನ್,ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಜಿಲ್ಲೆಯಲ್ಲಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶೇ 20ರಷ್ಟು ನುರಿತ ಮೀನುಗಾರರಿಗೆ ಕರಾವಳಿ ಕಾವಲು ಪಡೆಯಲ್ಲಿ ಉದ್ಯೋಗ ಮೀಸಲಿಡುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಮಂಗಳವಾರ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಿಸಾನ್ ಕಾರ್ಡ್ ಮೂಲಕ ಕೃಷಿಕರಿಗೆ ಹೆಚ್ಚು ಸೌಲಭ್ಯಗಳು ದೊರಕುತ್ತಿದೆ. ಆದರೆ ಕೃಷಿಯಲ್ಲೇ ಮೀನುಗಾರಿಕೆಯೂ ಒಂದು ಭಾಗವಾಗಿದ್ದು, ಕೃಷಿಕರಿಗೆ ಸಿಗುವಷ್ಟು ಸವಲತ್ತು ಮೀನುಗಾರಿಗೆ ಸಿಗುತ್ತಿಲ್ಲ. ಮೀನುಗಾರರಿಗೂ ಕಿಸಾನ್ ಕಾರ್ಡ್ನಲ್ಲಿ ಸೌಲಭ್ಯ ಒದಗಿಸುವಂತೆ ಸಂವಾದದಲ್ಲಿ ಕೆಲವು ಕೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮೀನುಗಾರಿಕೆ ನಿರ್ದೇಶಕರು, ಲೀಡ್ ಬ್ಯಾಂಕ್ ಮ್ಯಾನೇಜರ್, ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಉದ್ಘಾಟಿಸಿ ಮಾತನಾಡಿದ ಸಂಸದ ನಳಿನ್ಕುಮಾರ್ ಕಟೀಲ್, ಈ ಕಾರ್ಯಕ್ರಮದ ಮೂಲಕ ಸಾಕಷ್ಟು ಪರಿಣಿತರ ಅಭಿಪ್ರಾಯ ಪಡೆಯಲಾಗುವುದು. ಅವುಗಳನ್ನು ಕ್ರೋಡೀಕರಿಸಿ ಮೀನುಗಾರಿಕೆಯ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಯನ್ನು ಮುಂದಿಟ್ಟುಕೊಂಡು ಒಳ್ಳೆಯ ಯೋಜನೆ ಕಾರ್ಯಗತ ಮಾಡಲಾಗುವುದು. ಅದುವೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಕರಾವಳಿಯಲ್ಲಿ 3.28 ಲಕ್ಷ ಮೀನುಗಾರರಿದ್ದು, ಸಕ್ರಿಯ ಮೀನುಗಾರರ ಸಂಖ್ಯೆ 1.57 ಲಕ್ಷವಾಗಿದೆ. 8 ಮೀನುಗಾರಿಕಾ ಬಂದರು, 26 ಮೀನುಗಾರಿಕಾ ಇಳಿದಾಣ ಕೇಂದ್ರಗಳು, 128 ಮೀನು ಸಹಕಾರಿ ಸಂಘಗಳು, 1 ಮೀನು ಅಭಿವೃದ್ಧಿ ನಿಗಮ, 2 ಮೀನು ಮಾರಾಟ ಮಂಡಳಿಗಳಿವೆ. 4,585 ಯಾಂತ್ರೀಕೃತ ದೋಣಿಗಳು, 9,362 ಮೋಟಾರೀಕೃತ ದೋಣಿಗಳು, 9,097 ನಾಡ ದೋಣಿಗಳಿವೆ ಎಂದು ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬ್ರಹ್ಮಚಾರಿ ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಾರವಾರ ಶಾಸಕಿ ರೂಪಾಲಿ ನಾಯ್ಕ್, ಕಾಪು ಶಾಸಕ ಲಾಲಾಜಿ ಮೆಂಡನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೀನುಗಾರಿಕೆ ನಿರ್ದೇಶಕ ರಾಮಕೃಷ್ಣ ವೇದಿಕೆಯಲ್ಲಿದ್ದರು.</p>.<p class="Briefhead"><strong>ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್</strong><br />ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು, ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಮೀನುಗಾರರ ರಕ್ಷಣೆ ಹಾಗೂ ಅವರ ಮಾಹಿತಿಯನ್ನು ಕಲೆ ಹಾಕುವ ದೃಷ್ಟಿಯಿಂದ ಕ್ಯೂ ಆರ್ ಕೋಡ್ ಆಧಾರಿತ ಬಯೋಮೆಟ್ರಿಕ್ ಕಾರ್ಡ್ಗಳನ್ನು ಹೊಂದುವುದು ಕಡ್ಡಾಯವಾಗಿದೆ. ಜಿಲ್ಲಾಡಳಿತದ ವತಿಯಿಂದ ‘ಸೇವಾ ಸಿಂಧು ಪೋರ್ಟಲ್’ ವೆಬ್ಸೈಟ್ನಲ್ಲಿ ಈ ಕಾರ್ಡ್ ಒದಗಿಸಲು ಅಥವಾ ಆಯಾ ಮೀನುಗಾರಿಕಾ ಇಲಾಖೆಯಲ್ಲಿ ದೊರಕುವಂತೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.</p>.<p>***<br />ದೋಣಿಗಳಿಗೆ ಕಲರ್ ಕೋಡಿಂಗ್ ವ್ಯವಸ್ಥೆ ರೂಪಿಸಿದ್ದು, ಇದರಲ್ಲಿ ಸಮಸ್ಯೆ ಇದ್ದರೆ ಎಲ್ಲ ಮೀನುಗಾರರು ಮನವಿ ಸಲ್ಲಿಸಿದಲ್ಲಿ ಅದರಂತೆ ಕ್ರಮ ಕೈಗೊಳ್ಳಲಾಗುವುದು.<br /><em><strong>–ಚೇತನ್,ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>